Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಧರ್ಮದ ಅವಹೇಳನ : ದೇವಸ್ಥಾನದಲ್ಲಿ ರಾಹುಲ್ ಭಾವಚಿತ್ರದ ಡೋರ್ ಮ್ಯಾಟ್ 

Advertisement
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 1 ರಂದು ಸಂಸತ್ತಿನಲ್ಲಿ ಮಾಡಿದ ಭಾಷಣದ ವೇಳೆ, ಹಿಂದೂ ಧರ್ಮ ಎಂದಿಗೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ. ಆದರೆ ಕೆಲವರು 24 ಗಂಟೆಗಳ ಕಾಲ ದ್ವೇಷದಲ್ಲಿಯೇ ಕಾಲ ಕಳೆಯುತ್ತಾರೆ ಎಂದು ಹೇಳಿದ್ದು, ಇದು ವಿವಾದಕ್ಕೆ ಕಾರಣವಾಗಿತ್ತು.

ರಾಹುಲ್ ಗಾಂಧಿಯವರ ಈ ಹೇಳಿಕೆಯನ್ನು ಸದನದಲ್ಲಿಯೇ ಬಲವಾಗಿ ವಿರೋಧಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಹಿಂಸಾವಾದಿಗಳು ಎಂದು ಹೇಳಿದ್ದು ಇಡೀ ಹಿಂದೂ ಸಮುದಾಯಕ್ಕೆ ಮಾಡಿದ ಅವಮಾನ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ರಾಹುಲ್, ಬಿಜೆಪಿ ಸಮಸ್ತ ಹಿಂದೂ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ ಎಂದು ತಿರುಗೇಟು ನೀಡಿದ್ದರು.

ಇದರ ಮಧ್ಯೆ ಮಹಾರಾಷ್ಟ್ರದ ದೇವಾಲಯ ಒಂದರಲ್ಲಿ ರಾಹುಲ್ ಭಾವಚಿತ್ರವನ್ನು ಡೋರ್ ಮ್ಯಾಟ್ ಆಗಿ ಬಳಸಿರುವುದು ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಇದರಲ್ಲಿ ಹಿಂದೂ ಸಮುದಾಯವನ್ನು ಹಿಂಸಾವಾದಿಗಳೆಂದು ಹೇಳಲು ನಿಮಗೆಷ್ಟು ಧೈರ್ಯ ಎಂದು ಕೂಡ ಬರೆಯಲಾಗಿದೆ. ಇದಕ್ಕೆ ಈಗ ತರಹೇವಾರಿ ಕಾಮೆಂಟ್ ಗಳು ಹರಿದು ಬರುತ್ತಿವೆ.

ದೇವಾಲಯದ ಈ ಕಾರ್ಯಕ್ಕೆ ಹಲವರು ಮೆಚ್ಚಿಕೊಂಡಿದ್ದು, ಹಿಂದೂ ಸಮುದಾಯವನ್ನು ಹಿಂಸಾವಾದಿ ಎಂದು ಹೇಳಿದ ರಾಹುಲ್ ಗೆ ತಕ್ಕ ಪಾಠ ಎಂದಿದ್ದರೆ ಮತ್ತೆ ಕೆಲವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ.

ಅಲ್ಲದೆ ರಾಹುಲ್ ಗಾಂಧಿ ಸಮಸ್ತ ಹಿಂದೂ ಸಮಾಜ ಹಿಂಸಾವಾದಿಯಲ್ಲ. ಆದರೆ ಕೆಲವರು ಆ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದಾರೆ ಎಂದಿದ್ದರು. ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರ ಸರಸ್ವತಿ ಕೂಡಾ ರಾಹುಲ್ ಹೇಳಿಕೆಯನ್ನು ಸಮರ್ಥಿಸಿದ್ದಾರೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

 

 

 

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್