Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

3ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಅದ್ದೂರಿಯ ಚಾಲನೆ 

Advertisement
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರುಗುಪ್ಪಿ ಗ್ರಾಮದ ಮಲ್ಲಿಕಾರ್ಜುನ ಸಭಾಭವನದಲ್ಲಿ 3ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಅದ್ದೂರಿಯಾಗಿ ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗದಗದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಶಾಂತರಾಮ ಜುಗಳೆ ಅವರು ಮಾತನಾಡಿ ಶಿರುಗುಪ್ಪಿ ಗ್ರಾಮದಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜಿಸಿರುವ ಸಂಗತಿ ಹೆಮ್ಮೆಯ ಸಂಗತಿ. 6 ರಾಜ್ಯಗಳ ಕರಾಟೆ ಸ್ಪರ್ದಾಳುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.

ಕರಾಟೆ ಕ್ರೀಡೆಯಲ್ಲಿ ಕಲಿಯುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಸಾಧ್ಯ ಎಂದರು.

ಬಳಿಕ ರಾಷ್ಟ್ರೀಯ ಕರಾಟೆ ಅಧ್ಯಕ್ಷರಾದ ಮೋಹನಕುಮಾರ ರಜಪೂತ ಮಾತನಾಡಿ ಶಿರಗುಪ್ಪಿ ಗ್ರಾಮದಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ‌.

ಕರಾಟೆ ಕ್ರೀಡೆಯು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅತ್ಯುತ್ತಮವಾದ ಕ್ರೀಡೆವಾಗಿದೆ. ಪೋಷಕರು ಸಹ ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಕರಾಟೆಯ ತರಬೇತಿಯನ್ನು ನೀಡಿದರೆ, ಆ ಮಕ್ಕಳು ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

ಬಳಿಕ ರಾಣಿ ಚೆನ್ನಮ್ಮ ಸೆಲ್ಫ್ ಡಿಫೆನ್ಸ್ ಹಾಗೂ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಪಾಟೀಲ ಅವರು ಮಾತನಾಡಿ ಈ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 6 ರಾಜ್ಯಗಳಿಂದ ಸುಮಾರು 310 ಕರಾಟೆ ಕ್ರೀಡಾಪಟುಗಳು ಭಾಗಿಯಾಗಿದ್ದಾರೆ.

ಉತ್ತರ ಪ್ರದೇಶ, ರಾಜಸ್ಥಾನ, ಅಸ್ಸಾಂ, ಮಹಾರಾಷ್ಟ್ರ, ದೆಹಲಿ ,ಗೋವಾ ರಾಜ್ಯದ ಕರಾಟೆ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜುಗೂಳ ಗ್ರಾಮದ ಕೆ ಎಸ್.ಎಸ್. ಫ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮೃತ್ಯುಂಜಯ ಹೂಗಾರ,ಶಿಕ್ಷಣ ಪರಿವೀಕ್ಷಕರಾದ ಲಕ್ಷ್ಮಣ ತೋರಣಗಟ್ಟಿ,ಶಿವಾನಂದ ಹಳ್ಳಿಗೌಡ್ರು,ಮಹಾವೀರ ಜೀರಗಿಹಾಳ,ಮಾಯಾಪ್ಪಾ ಪೂಜಾರಿ,ಲಕ್ಷ್ಮಣ ಚೌಗಲಾ,ತೇಜಪಾಲ ಉಪಾಧ್ಯೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ