Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿಯನ್ನು ಕೊಂದು ಬೆಡ್ ಕೆಳಗೆ ಅಡಗಿಸಿಟ್ಟ ಕಿರಾತಕ

Advertisement
ಬೆಳಗಾವಿ: ಪಾಪಿ ಪತಿಯೋರ್ವ ತವರು ಮನೆಯಿಂದ ವರದಕ್ಷಿಣೆ ತರದ ಹೆಂಡತಿಯನ್ನು ಕೊಂದು ಬೆಡ್ ಕೆಳಗೆ ಹೆಣ ಅಡಗಿಸಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ  ತಾಲೂಕಿನ ಕಮಲದಿನ್ನಿಯಲ್ಲಿ ನಡೆದಿದೆ.

ಕಳೆದ ಮೂರು ದಿನಗಳ ಪತ್ನಿ ಸಾಕ್ಷಿ ಆಕಾಶ್ ಕಂಬಾರ(20) ರನ್ನು ಪತಿ ಆಕಾಶ್ ಕಂಬಾರ್ ಕೊಲೆ ಮಾಡಿ, ಶವವನ್ನು ಬೆಡ್ ಕೆಳಗೆ ಹೆಣ ಅಡಗಿಸಿಟ್ಟು, ಮೊಬೈಲ್ ಸ್ವಿಚ್ ಆಪ್ ಮಾಡಿಕೊಂಡು ಪರಾರಿಯಾಗಿದ್ದಾನೆ.

ಕೇವಲ 4 ತಿಂಗಳ ಹಿಂದಷ್ಟೇ ಆಕಾಶ್ ಕಂಬಾರ ಜೊತೆ ಸಾಕ್ಷಿಗೆ ಮದುವೆಯಾಗಿತ್ತು. ಆದರೆ, ಪದೇ ಪದೇ ವರದಕ್ಷಿಣೆ ತರುವಂತೆ ಆಕಾಶ್ ಕಂಬಾರ ಪೀಡಿಸುತ್ತಿದ್ದ. ಆದರೆ, ಮೂರು ದಿನಗಳ ಹಿಂದೆ ಜೋರು ಜಗಳ ನಡೆದು, ಸಾಕ್ಷಿಯನ್ನು ಆಕಾಶ್ ಕಂಬಾರ ಕೊಲೆ ಮಾಡಿದ್ದಾನೆ. ಆದರೆ, ಶವವನ್ನು ಏನು ಮಾಡಬೇಕು ಅಂತ ತೋಚದೇ ಬೆಡ್ ಕೆಳಗೆ ಅಡಗಿಸಿಟ್ಟಿದ್ದಾನೆ.

ಸಾಕ್ಷಿ ಕೊಲೆ ನಡೆದು ಮೂರು ದಿನಗಳು ಕಳೆದಿವೆ. ಆದರೆ, ಆಕಾಶ್ ಕಂಬಾರ್​ನ ತಾಯಿ ಮುಂಬೈನಿಂದ ವಾಪಸ್ ಬಂದಾಗ ಮನೆಯಲ್ಲಿ ಕಮಟು ವಾಸನೆ ಬಂದಿದೆ.

ಎಲ್ಲಿಂದ ವಾಸನೆ ಬರುತ್ತಿದೆ ಅಂತ ಗಮನಿಸಿದಾಗ ಬೆಡ್ ಕೆಳಗೆ ಸೊಸೆಯ ಶವ ಇತ್ತು. ಇನ್ನೊಂದೆಡೆ ಮಗನೂ ಮನೆಯಲ್ಲಿ ಇರಲಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ಪೊಲೀಸರ ಹಾಗೂ ಗೋಕಾಕ ಡಿವೈಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಭೇಟಿ ನೀಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆರೋಪಿ ಆಕಾಶ್ ಕಂಬಾರ್ ಇನ್ನೂ ಸಿಕ್ಕಿಲ್ಲ. ಆದ್ದರಿಂದ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಸಾಕ್ಷಿ ಕುಟುಂಬಸ್ಥರು ತಹಶೀಲ್ದಾರ್ ಮುಂದೆ ವರದಕ್ಷಿಣೆ ಆರೋಪ ಮಾಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ