Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಷರ ಬಂಡಿಯೊಂದಿಗೆ ಅದ್ದೂರಿ ಶಾಲಾ ಪ್ರಾರಂಭೋತ್ಸವ

Advertisement
ಇಳಕಲ್  : ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ನಂದವಾಡಗಿಯಲ್ಲಿ ೨೦೨೫-೨೬ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ವಿಶೇಷ ದಾಖಲಾತಿ ಆಂದೋಲನವು ಮೇ ೩0 ರಂದು ಅತ್ಯಂತ ಸಡಗರ, ಸಂಭ್ರಮದಿಂದ ಜರುಗಿತು. ಅಕ್ಷರ ಬಂಡಿ, ಘೋಷಣಾ ಫಲಕಗಳು, ಕಲಿಕಾ ಕುಂಭದೊಂದಿಗೆ ಊರಿನಲ್ಲಿ ಸಂಚರಿಸಿ ಕರಪತ್ರವನ್ನು ನೀಡಿ ಸರಕಾರಿ ಶಾಲೆಯ ಸೌಲಭ್ಯ, ಮಹತ್ವ ಪಾಲಕರಿಗೆ ಮನವರಿಕೆ ಮಾಡಲಾಯಿತು.

ಕ್ಷರ ಬಂಡಿಯೊಂದಿಗೆ ಶಿಕ್ಷಕರು, ವಿದ್ಯಾರ್ಥಿನಿಯರು, ಎಸ್ ಡಿ ಎಂ ಸಿ ಸರ್ವ ಸದಸ್ಯರು, ಶಿಕ್ಷಣ ಪ್ರೇಮಿಗಳು ಸಾಗಿ ಮಕ್ಕಳನ್ನು ಶಾಲೆಗೆ ಕರೆ ತರಲಾಯಿತು. ಗ್ರಾಮ ಪಂಚಾಯತ ಅಧ್ಯಕ್ಷರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಅಧಿಕಾರ ವೃಂದ ವಿಶೇಷ ಜಾಥಾದಲ್ಲಿ ಪಾಲ್ಗೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಮುದ್ದು ಮಕ್ಕಳಿಗೆ ಶಿಕ್ಷಕರು ಹೂ ಗುಚ್ಛ ನೀಡಿ, ಸಿಹಿ ನೀಡಿ ಸ್ವಾಗತಿಸಿದರು.

ಪ್ರಾರಂಭ ದಿನವೇ ಮಕ್ಕಳಿಗೆ ಪಠ್ಯ ಪುಸ್ತಕ ನೀಡಲಾಯಿತು. ಹೆಚ್ಚು ವಿದ್ಯಾರ್ಥಿನಿಯರು ದಾಖಲಾತಿ ಪಡೆದು ಶಾಲೆಗೆ ಹಾಜರಾದರು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಜಯಶ್ರೀ ವಗ್ಗರ, ಉಪಾಧ್ಯಕ್ಷರು ಸುಭಾಸಗೌಡ ರಾಯನಗೌಡ್ರು, ನಂದಿನಿ ಗೌಡರ, ರಾಜಶೇಖರ ಕಂಠಿ, ವೀರಭದ್ರಯ್ಯ ಮಠ, ಮಾಬುಸಾಬ ಮುಜಾವರ, ಶಿವಪ್ಪ ಕಟಾಂಬ್ಳಿ, ಬಸವರಾಜ ಮಲ್ಲನಗೌಡ್ರು, ಶರಣಪ್ಪ ವಗ್ಗರ, ಶಾಲಾ ಮುಖ್ಯ ಗುರುಮಾತೆ ವಿ ಬಿ ಕುಂಬಾರ, ಜ್ಯೋತಿ, ಜಿ ಆರ್ ನದಾಫ್, ಎಸ್ ಬಿ ಮಲಗಿಹಾಳ, ಡಾ ವಿಶ್ವನಾಥ ತೋಟಿ, ಬಸವರಾಜ ಬಲಕುಂದಿ, ಚಂದ್ರಶೇಖರ ಹುತಗಣ್ಣ, ಅಶ್ವಿನಿ ಕಪ್ಪರದ, ಗಂಗಾ ಗುರುಮಾತೆ, ವಿದ್ಯಾರ್ಥಿನಿಯರು, ಬಿಸಿಯೂಟ ಸಿಬ್ಬಂದಿ, ಊರಿನ ಯುವಕರು, ಶಿಕ್ಷಣ ಪ್ರೇಮಿಗಳು ಭಾಗವಹಿಸಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ