Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಸಮಾಜದಿಂದ ಅದ್ದೂರಿ ಯಜುರ್ ಉಪಾಕರ್ಮ ಮಹೋತ್ಸವ

Advertisement
ತುರುವೇಕೆರೆ: -ತಾಲ್ಲೂಕು ವಿಶ್ವಕರ್ಮ ಸಮಾಜ, ಶ್ರೀ ಕಾಳಿಕಾಂಬ ದೇವಾಲಯ ಜೀರ್ಣೋದ್ಧಾರ ಟ್ರಸ್ಟ್ ವತಿಯಿಂದ ಅದ್ದೂರಿ ಶ್ರೀ ವಿಶ್ವಕರ್ಮ ಯಜುರ್ ಉಪಾಕರ್ಮ ಮಹೋತ್ಸವವನ್ನು ಆಚರಿಸಲಾಯಿತು.



ಆಗಸ್ಟ್ 19 ರಂದು ಸೋಮವಾರ ಬೆಳಿಗ್ಗೆ 8 ಗಂಟೆಗೆ ಪಟ್ಟಣದ ಸುಬ್ರಮಣ್ಯನಗರದಲ್ಲಿರುವ ಸಿಹಿನೀರು ಬಾವಿಯ ಬಳಿ ಗಂಗಾಪೂಜೆ ನೆರವೇರಿಸಿ, ಕಳಸ ಹೊತ್ತ ಮಹಿಳೆಯರೊಂದಿಗೆ ಶ್ರೀ ಕಾಳಿಕಾಂಬ ಅಮ್ಮನವವರ ಉತ್ಸವ ನಡೆಸಲಾಯಿತು. ಶ್ರೀ ವಿಶ್ವಕರ್ಮ ಶ್ರೀ ಕಾಳಿಕಾಂಭ ಸುಪ್ರಭಾತ, ಗಂಗಾವತರಣ ಆಹ್ವಾನ, ಅಮ್ಮನವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಪುಣ್ಯಾಹವಾಚನ, ಗಣಪತಿ ಪೂಜೆ, ದೇವನಾಂದಿ ನವಗ್ರಹ ಆರಾಧನೆ, ಋಷಿ ಆರಾಧನೆ, ನವಗ್ರಹ ಹೋಮ, ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ಹೋಮಹವನಾದಿಗಳನ್ನು ನೆರವೇರಿಸಿ ನಂತರ ಯಜ್ಞೋಪವೀತ ಧಾರಣೆ ಮಾಡಲಾಯಿತು. ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.

ವಿಶ್ವಕರ್ಮ ಯಜುರ್ ಉಪಾಕರ್ಮ ಮಹೋತ್ಸವದ ಕುರಿತು ಮಾತನಾಡಿದ ವಿಶ್ವಕರ್ಮ ಸಮಾಜದ ಅಧ್ಯಕ್ಷ ಟಿ.ಎನ್.ಅರುಣ್, ಪ್ರತಿ ವರ್ಷದಂತೆ ಈ ಈ ವರ್ಷವೂ ವಿಶ್ವಕರ್ಮ ಯಜುರ್ ಉಪಾಕರ್ಮ ಮಹೋತ್ಸವವನ್ನು ಆಯೋಜಿಸಲಾಗಿದೆ. ಸಮಾಜದ ಹಿರಿಯರು ಹಿಂದಿನಿಂದ ನಡೆಸಿಕೊಂಡು ಪದ್ದತಿ, ಸಂಪ್ರದಾಯವನ್ನು ನಾವು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ.

ಶ್ರೀ ಕಾಳಿಕಾಂಬ ಮಾತೆಯ ಆರ್ಶೀವಾದದೊಂದಿಗೆ ಉಪಾಕರ್ಮ ಮಹೋತ್ಸವ ನಿರ್ವಿಘ್ನವಾಗಿ ನೆರವೇರಿದ್ದು, ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ, ವಿಶ್ವಕರ್ಮ ಸಮುದಾಯದ ಬಾಂದವರೊಂದಿಗೆ ಶ್ರೀ ಕಾಳಿಕಾಂಬ ದೇವಿ ಹಾಗೂ ಶ್ರೀ ವಿರಾಟ ವಿಶ್ವಕರ್ಮ ದೇವರ ಉತ್ಸವವನ್ನು ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ದೇವರಾಜ್, ಉಪಾಧ್ಯಕ್ಷರಾದ ಪ್ರೇಮ್ ಕುಮಾರ್, ನಾಗರಾಜಾಚಾರ್, ಪ್ರಧಾನ ಕಾರ್ಯದರ್ಶಿ ಸತೀಶ್, ಖಜಾಂಚಿ ಸೀನಾಚಾರ್, ಸಹಕಾರ್ಯದರ್ಶಿ ನಂದೀಶ್, ಸಂಘಟನಾ ಕಾರ್ಯದರ್ಶಿ ಗೌತಮ್, ರಂಗಾಚಾರ್, ಅಶೋಕ್, ನಿರ್ದೇಶಕರಾದ ಬಸವರಾಜು, ಚಂದ್ರು, ಮೋಹನ್, ಲಿಂಗಾಚಾರ್ ಸೇರಿದಂತೆ ವಿಶ್ವಕರ್ಮ ಬಾಂದವರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ