ಬಾಗೇಪಲ್ಲಿ ತಾಲ್ಲೂಕಿನಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಕಾಂಗ್ರೇಸ್ ಪಕ್ಷದ ವಿರುದ್ಧ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಭಾರತೀಯ ಜನತಾ ಪಾರ್ಟಿ ಬಾಗೇಪಲ್ಲಿ ಮಂಡಲ ಅಧ್ಯಕ್ಷರಾದ ಆರ್.ಪ್ರತಾಪ್ ರವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿರುವ ಕಾಂಗ್ರೇಸ್ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆಯಲ್ಲಿ ಬಾಗೇಪಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಆರ್.ಪ್ರತಾಪ್ ರವರು ಮಾತನಾಡಿ, ಬಿಜೆಪಿ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಸೀಕಲ್ ರಾಮಚಂದ್ರಗೌಡರ ಆದೇಶದ ಮೇರೆಗೆ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜುರವರ ಸಲಹೆಯಂತೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವೆ. ಇಂದು ಇಡೀ ದೇಶದಲ್ಲಿ ಭಾರತೀಯ ಜನತಾ ಪಕ್ಷದವತಿಯಿಂದ ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೇಸ್ ಪಕ್ಷದ ವಿರುದ್ಧ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಏಕೆಂದರೆ ಇತ್ತೀಚೆಗೆ ಕೇಂದ್ರ ಸರ್ಕಾರದ ವಿಶೇಷ ಅಧಿವೇಶನದಲ್ಲಿ ಎನ್.ಡಿ.ಎ ಮೈತ್ರಿಕೊಟವು ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದಾಗ ಕಾಂಗ್ರೇಸ್ ಪಕ್ಷವು ವಿರೋಧ ಮಾಡುತ್ತಿರುವುದು ಖಂಡನೀಯ ವಿಚಾರವಾಗಿದೆ.
ಕಳೆದ 65 ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಕಾಂಗ್ರೇಸ್ ಪಕ್ಷವು, ದಲಿತರ ಪರ, ಮೈನಾರೀಟಿ ಪರ, ಮಹಿಳೆಯರ ಪರ ಸುಳ್ಳು ಹೇಳುತ್ತಿರುವುದು ದೇಶದ ಜನರಿಗೆ ಇಂದು ಅರಿವಾಗಿದೆ.ಭಾರತೀಯ ಸಂಸ್ಕೃತಿಯಲ್ಲಿ, ಭಾರತ ದೇಶದಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ನೀಡುವುದು ನಮ್ಮೆಗೆಲ್ಲ ತಿಳಿದಿರುವ ವಿಚಾರವಾಗಿದೆ. ಆದರೆ ಮಹಿಳೆಯರ ಮೀಸಲಾತಿ ವಿರೋಧಿಸಿರುವ ಕಾಂಗ್ರೇಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ಕಲಿಸಬೇಕು. ಮುಂಬರುವ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಗೆ ಬಹುಮತವನ್ನು ನೀಡುಬೇಕು, ಆಗ ಬಿಜೆಪಿ ಪಕ್ಷವು ಮಹಿಳೆಯರಿಗೆ ಮೀಸಲಾತಿಯನ್ನು ಕೊಡುವುದರ ಜೊತೆಗೆ ಈ ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯಸಿಗುವಂತೆ ಮಾಡುತ್ತದೆ ಎಂದರು.
ವರದಿ: ಬಿ.ಎ.ಬಾಬಾಜಾನ್

