Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃತಪಟ್ಟ ಪತಿಯ ಶವದೊಂದಿಗೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ

Advertisement
ಕೊಟ್ಟಿಗೆಹಾರ : ಮನುಷ್ಯನ ಕಣ್ಣಾಲಿಗಳು ಒದ್ದೆಯಾಗುವಂತಹ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವದೊಂದಿಗೆ, ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ ಹತ್ತು ದಿನಗಳ ಕಾಲ ಒಂದೇ ಮನೆಯಲ್ಲಿ ಕಳೆದಿದ್ದಾರೆ.

ಘಟನೆಯ ಹಿನ್ನೆಲೆ

ಮೃತಪಟ್ಟವರನ್ನು ಸಿರಿಲ್ ಮೋನಿಸ್ ಎಂದು ಗುರುತಿಸಲಾಗಿದೆ. ಇವರು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರದ ನಿವಾಸಿಯಾಗಿದ್ದರು. ಮೋನಿಸ್ ಅವರು ಸುಮಾರು 10 ದಿನಗಳ ಹಿಂದೆಯೇ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಇವರ ಪತ್ನಿ ಮಾನಸಿಕ ಅಸ್ವಸ್ಥರಾಗಿದ್ದರಿಂದ, ಪತಿ ಸತ್ತಿರುವ ವಿಷಯವೇ ಅವರಿಗೆ ತಿಳಿದಿರಲಿಲ್ಲ.

ಹತ್ತು ದಿನಗಳ ಕಾಲ ನರಕಸದೃಶ ವಾಸ

ಪತಿ ಮಲಗಿದ್ದಾರೆಂದೇ ಭಾವಿಸಿದ್ದ ಪತ್ನಿ, ಕಳೆದ ಹತ್ತು ದಿನಗಳಿಂದ ಶವದ ಪಕ್ಕದಲ್ಲೇ ಕಳೆದಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತು ನಾರುತ್ತಿದ್ದರು, ಹುಳುಗಳು ಬಿದ್ದಿದ್ದರೂ ಸಹ ಆಕೆಗೆ ಅದರ ಅರಿವಾಗಿರಲಿಲ್ಲ. ಮನೆಯಿಂದ ವಿಪರೀತ ದುರ್ನಾತ ಬರತೊಡಗಿದಾಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಬಣಕಲ್ ಪೊಲೀಸರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

15 ದಿನಗಳ ಹಿಂದೆ ಊರಿಗೆ ಬಂದು ಮಗ ತಂದೆ-ತಾಯಿಯನ್ನು ನೋಡಿಕೊಂಡು ಹೋಗಿದ್ದನು. ನಂತರ ಪ್ರತಿನಿತ್ಯ ತಾಯಿಗೆ ಕರೆ ಮಾಡಿದ್ದನು. ಕರೆ ಮಾಡಿದಾಗ ತಾಯಿ ತಂದೆ ಚೆನ್ನಾಗಿದ್ದಾರೆ ಎಂದೇ ಹೇಳುತ್ತಿದ್ದನು. ಪಾಪ ಮಗನಿಗೆ ತಂದೆ ಸತ್ತಿರುವ ವಿಷಯವೇ ಗೊತ್ತಿರಲಿಲ್ಲ.

ನನ್ನ ಗಂಡ ಬೇಕು ಎಂದು ಪತ್ನಿಯ ಅಳಲು

ಪೊಲೀಸರು ಮತ್ತು ಸ್ಥಳೀಯರು ಶವವನ್ನು ಹೊರತೆಗೆಯಲು ಮುಂದಾದಾಗ, ಪತ್ನಿ ತೀವ್ರವಾಗಿ ವಿರೋಧಿಸಿದ್ದಾರೆ. “ನನ್ನ ಗಂಡನಿಗೆ ಏನೂ ಆಗಿಲ್ಲ, ಅವರು ಮಲಗಿದ್ದಾರೆ. ಯಾರೂ ನನ್ನ ಗಂಡನನ್ನು ಮುಟ್ಟಬೇಡಿ, ನನಗೆ ನನ್ನ ಗಂಡ ಬೇಕು” ಎಂದು ಅಳುತ್ತಾ ಪಟ್ಟು ಹಿಡಿದಿದ್ದು ನೋಡುಗರ ಕರುಳು ಹಿಂಡುವಂತಿತ್ತು.

ಮಾನವೀಯತೆ ಮೆರೆದ ಸಮಾಜ ಸೇವಕ ಆರೀಫ್:

ಶವ ಸಂಪೂರ್ಣವಾಗಿ ಕೊಳೆತು ಹುಳು ಬಿದ್ದಿದ್ದರಿಂದ ಅದನ್ನು ಮುಟ್ಟಲು ಸ್ಥಳೀಯರು ಹಿಂಜರಿಯುತ್ತಿದ್ದರು. ಈ ಸಂದರ್ಭದಲ್ಲಿ ಮೂಡಿಗೆರೆಯ ಪ್ರಸಿದ್ಧ ಸಮಾಜ ಸೇವಕ ಆರೀಫ್ ಅವರು ಮಾನವೀಯತೆ ಮೆರೆದಿದ್ದಾರೆ.

ಕೊಳೆತ ಶವವನ್ನು ಅತೀ ಜಾಗರೂಕತೆಯಿಂದ ಹಾಗೂ ಗೌರವಯುತವಾಗಿ ದಮನ (ಅಂತ್ಯಕ್ರಿಯೆ) ಮಾಡಲು ಮುಂದೆ ಬಂದಿರುವ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಪುತ್ರ ಬೆಂಗಳೂರಿನಲ್ಲಿ ಉದ್ಯೋಗಿ:

ದಂಪತಿಯ ಪುತ್ರ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತಂದೆಯ ಸಾವಿನ ಸುದ್ದಿ ತಿಳಿದು ಊರಿಗೆ ಧಾವಿಸಿದ್ದಾರೆ. ಮನೆಯಲ್ಲಿ ತಂದೆ-ತಾಯಿ ಇಬ್ಬರೇ ವಾಸವಿದ್ದರು ಎನ್ನಲಾಗಿದೆ.

ಈ ಘಟನೆಯು ಮಾನಸಿಕ ಅಸ್ವಸ್ಥರ ಕುಟುಂಬದವರ ದಯನೀಯ ಸ್ಥಿತಿಯನ್ನು ಕನ್ನಡಿ ಹಿಡಿಯುವಂತಿದೆ. ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ