Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

12 ನೇ ತರಗತಿಯ ವಿದ್ಯಾರ್ಥಿಯನ್ನು ಮದುವೆಯಾದ 2 ಮಕ್ಕಳ ತಾಯಿ!

Advertisement

ಅಮ್ರೋಹ: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಂತರ್ ಧರ್ಮೀಯ ವಿವಾಹವಾಗಿದ್ದು, 30 ವರ್ಷದ ಮುಸ್ಲಿಂ ಮಹಿಳೆಯೊಬ್ಬರು 12ನೇ ತರಗತಿ ವಿದ್ಯಾರ್ಥಿಯ ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ.


ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ಬುಧವಾರ ಘಟನೆ ನಡೆದಿದ್ದು, ಸ್ಥಳೀಯ ದೇಗುಲದಲ್ಲಿ 2 ಮಕ್ಕಳ ತಾಯಿ ಶಬನಂ ಮತ್ತು 12ನೇ ತರಗತಿಯ ವಿದ್ಯಾರ್ಥಿ 18 ವರ್ಷದ ಯುವಕ ಶಿವ ಎಂಬಾತನನ್ನು ಮದುವೆಯಾಗಿದ್ದಾರೆ. ಮದುವೆಗೆ ಶಬನಂ ಪೋಷಕರು ಮತ್ತು ಗ್ರಾಮದ ಹಿರಿಯರು ಒಪ್ಪಿಗೆ ಸೂಚಿಸಿ ಮದುವೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ಇನ್ನು ಮದುವೆಗೂ ಮುನ್ನ ಮುಸ್ಲಿಂ ಮತಕ್ಕೆ ಸೇರಿದ್ದ ಶಬನಂರನ್ನು ಸ್ಥಳೀಯ ಅರ್ಚಕರು ಹಿಂದೂ ಧರ್ಮಕ್ಕೆ ಬರ ಮಾಡಿಕೊಂಡಿದ್ದಾರೆ. ಬಳಿಕ ಆಕೆಗೆ ಶಿವಾನಿ ಎಂದು ಮರು ನಾಮಕರಣ ಮಾಡಿ ಬಳಿಕ ಮದುವೆ ಮಾಡಿಸಿದ್ದಾರೆ.


ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹಸನ್ಪುರ ವೃತ್ತ ಅಧಿಕಾರಿ ದೀಪ್ ಕುಮಾರ್ ಪಂತ್ ಅವರು, ಅವರ ಪ್ರಕಾರ, ಶಿವಾನಿ ಎಂಬ ಮಹಿಳೆಯನ್ನು ಹಿಂದೆ ಶಬ್ನಮ್ ಎಂದು ಕರೆಯಲಾಗುತ್ತಿತ್ತು. ಆಕೆಯ ಪೋಷಕರು ಈಗ ಜೀವಂತವಾಗಿಲ್ಲ. ಆಕೆ ಹಿಂದೆ ಎರಡು ಬಾರಿ ವಿವಾಹವಾಗಿದ್ದರು. ಇಬ್ಬರಿಂದಲೂ ವಿಚ್ಚೇದನ ಪಡೆದಿದ್ದಾರೆ ಎಂದು ಹೇಳಿದರು.


ಅಂತೆಯೇ ಪೊಲೀಸರು ಪ್ರಸ್ತುತ ವಿವಾಹದ ಸುತ್ತಲಿನ ಸಂದರ್ಭಗಳನ್ನು ಪರಿಶೀಲಿಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ ಯಾವುದೇ ಕಾನೂನು ದೂರುಗಳು ದಾಖಲಾಗಿಲ್ಲ ಎಂದು ಹೇಳಿದರು.


ಇನ್ನು ಶಿವಾನಿ (ಶಬನಂ) ಮೊದಲು ಮೀರತ್ನಲ್ಲಿ ಒಬ್ಬ ವ್ಯಕ್ತಿಯನ್ನು ವಿವಾಹವಾಗಿದ್ದರು. ಆದರೆ ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ನಂತರ ಅವರು 2011 ರಲ್ಲಿ ರಸ್ತೆ ಅಪಘಾತದಲ್ಲಿ ಅಂಗವಿಕಲರಾಗಿದ್ದ ಸೈದನ್ವಾಲಿ ಗ್ರಾಮದ ನಿವಾಸಿ ತೌಫಿಕ್ ಎಂಬುವವರನ್ನು ವಿವಾಹವಾಗಿದ್ದರು.


ಇತ್ತೀಚೆಗೆ, ಶಬನಂ 12 ನೇ ತರಗತಿಯಲ್ಲಿ ಓದುತ್ತಿದ್ದ ಸುಮಾರು 18 ವರ್ಷ ವಯಸ್ಸಿನ ಹುಡುಗ ಶಿವ ಎಂಬಾತನೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದರು. ಬಳಿಕ ವಿಚಾರ ಎಲ್ಲರಿಗೂ ತಿಳಿಯುತ್ತಲೇ ಆಕೆ ಕಳೆದ ವಾರ ಶುಕ್ರವಾರ ತನ್ನ 2ನೇ ಗಂಡ ತೌಫಿಕ್ನಿಂದ ವಿಚ್ಛೇದನ ಪಡೆದರು. ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಶಿವಾನಿ ಎಂಬ ಹೆಸರನ್ನು ಮರುನಾಮಪಕರಣ ಮಾಡಿಕೊಂಡು ಪ್ರಿಯಕರ ಶಿವನನ್ನು ಮದುವೆಯಾಗಿದ್ದಾರೆ.


ಇನ್ನು ವರ ಶಿವನ ತಂದೆ, ಸೈದನ್ವಾಲಿ ನಿವಾಸಿ ದತಾರಾಮ್ ಸಿಂಗ್ ಬಗ್ಗೆ ಮಾತನಾಡಿದ್ದು, ತಮ್ಮ ಮಗನ ನಿರ್ಧಾರವನ್ನು ಬೆಂಬಲಿಸುವುದಾಗಿ ಮತ್ತು ದಂಪತಿಗಳು ಸಂತೋಷವಾಗಿದ್ದರೆ ಕುಟುಂಬವು ಸಂತೋಷವಾಗಿರುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ ಇಬ್ಬರೂ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಾರೆ ಎಂದು ನಾವು ಭಾವಿಸುತ್ತೇವೆ" ಎಂದು ಅವರು ಹೇಳಿದರು.


ಅಂದಹಾಗೆ ಉತ್ತರ ಪ್ರದೇಶವು ಮತಾಂತರ ವಿರೋಧಿ ಕಾನೂನು ಜಾರಿಯಲ್ಲಿರುವ ರಾಜ್ಯವಾಗಿದ್ದು, ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆ, 2021 ಬಲವಂತ, ವಂಚನೆ ಅಥವಾ ಯಾವುದೇ ಇತರ ವಂಚನೆಯ ಮೂಲಕ ಧಾರ್ಮಿಕ ಮತಾಂತರವನ್ನು ನಿಷೇಧಿಸುತ್ತದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ