Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೆಬನಾನ್ ಮೇಲೆ ಇಸ್ರೇಲ್ ಸರಣಿ ವೈಮಾನಿಕ ದಾಳಿ : ಕನಿಷ್ಠ 89 ಜನರು ಸಾವು

Advertisement

ಬೇರೂತ್:ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಮತ್ತಷ್ಟು ದಟ್ಟವಾಗುತ್ತಿದ್ದು, ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ಸರಣಿ ವೈಮಾನಿಕ ದಾಳಿಗಳಲ್ಲಿ ಕನಿಷ್ಠ 89 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ದಾಳಿಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.


ಲೆಬನಾನ್‌ನ ದಕ್ಷಿಣ ಭಾಗ ಮತ್ತು ಬೆಕಾ ಕಣಿವೆಯ ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಸಾವನ್ನಪ್ಪಿದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.


ಗಾಯಗೊಂಡವರ ಸಂಖ್ಯೆ ಹೆಚ್ಚಾಗಿರುವುದರಿಂದ ಬೈರೂತ್ ಮತ್ತು ಸುತ್ತಮುತ್ತಲಿನ ಆಸ್ಪತ್ರೆಗಳು ಭರ್ತಿಯಾಗಿದ್ದು, ತುರ್ತು ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.


ಉಗ್ರಗಾಮಿ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ. ಆದರೆ, ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆದಿರುವುದು ಅಂತಾರಾಷ್ಟ್ರೀಯ ವಲಯದಲ್ಲಿ ಆತಂಕ ಮೂಡಿಸಿದೆ.


ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮದ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ ಇಸ್ರೇಲ್ ಈ ಕಠಿಣ ಕ್ರಮ ಕೈಗೊಂಡಿರುವುದು ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ