ಧಾರವಾಡ : ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಶ್ರೀ ಕುಮಾರ ನಿತೀಶಗೌಡ ತಡಸ ಪಾಟೀಲ್ ಅಭಿಮಾನಿ ಬಳಗ ಸಂಯುಕ್ತ ಆಶ್ರಯದಲ್ಲಿ ವೇದಾಂತ್ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಂಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಗೆ ನಿರ್ವಹಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಯುವಕರು ಶಿಬಿರದಲ್ಲಿ ತಪಾಸನೆಯನ್ನು ಮಾಡಿಸಿಕೊಳ್ಳುವುದರ ಮೂಲಕ ಶಿಬಿರವನ್ನು ಯಶಸ್ವಿಗೆ ಗೊಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ಚಂದ್ರು ದೊಡ್ಡೂರು ಶಿವಾನಂದ ಹುಲಗೂರು ಮಲ್ಲಿಕಾರ್ಜುನ್ ಅರಳಿಕಟ್ಟಿ ಬಿ ಆರ್ ಮೂಲಿಮನಿ ಎಲ್ಲಪ್ಪ ಹುಲಿಕಟ್ಟಿ ಗ್ರಾಂ ಪಂಚಾಯತಿ ಸಿಬ್ಬಂದಿಗಳು ಹಾಗೂ ವೇದಾಂತ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಗ್ರಾಮದ ಯುವಕರು ಹಾಗೂ ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ವರದಿ :ವಿನಾಯಕ ಗುಡ್ಡದಕೇರಿ


