Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಣ್ಣು ಮಗುವೆಂದು ವಿಷವುಣಿಸಿ ಕೊಂದ ತಂದೆ : ಬೆಳಗಾವಿಯಲ್ಲಿ ಭಯಾನಕ ಘಟನೆ

Advertisement
ಬೆಳಗಾವಿ: 15 ದಿನದ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿದ್ದು, ಸದ್ಯ ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಘಟನೆ ನಡೆದಿತ್ತು. ಕಾಕತಿ ಪೊಲೀಸ್​ ಠಾಣೆಗೆ ಮಗುವಿನ ತಾಯಿ ಶೀಲಾ ದೂರು ನೀಡಿದ್ದರು.

ನಡೆದಿದ್ದೇನು?

ಇತ್ತೀಚೆಗೆ ಅಂದರೆ ಮಾರ್ಚ್​ 17ರಂದು 15 ದಿನಗಳ ಹಿಂದೆ ಜನಿಸಿದ್ದ ಹಸುಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿತ್ತು.

ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಮಗುವಿನ ಸಾವಿಗೆ ತಂದೆಯೇ ಕಾರಣ ಎಂಬ ಗಂಭೀರ ಆರೋಪನ್ನು ಕುಟುಂಬಸ್ಥರೇ ಮಾಡಿದ್ದರು.

ಒಂದು ವರ್ಷದ ಹಿಂದೆ ಭೀಮರಾಯ ಶೀಲಾ‌ರನ್ನು ಮದುವೆ ಆಗಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಭೀಮರಾಯಗೆ ಗಂಡು ಮಕ್ಕಳೆಂದರೆ ಹುಚ್ಚು. ಆದರೆ 15 ದಿನದ ಹಿಂದೆ ಹೆಣ್ಣು ಮಗು ಆಗಿದ್ದಕ್ಕೆ ನೊಂದುಕೊಂಡಿದ್ದರು.

ಪತ್ನಿ ತವರು ಮನೆಗೆ ಬಂದಿದ್ದ ಭೀಮರಾಯ ಮಗು ನೋಡಿ ವಾಪಾಸ್ ಹೋಗಿದ್ದರು. ಅವರು ಅತ್ತ ಹೋಗ್ತಿದ್ದಂತೆ ಮಗು ಅಸ್ವಸ್ಥಗೊಂಡಿತ್ತು. ಕೂಡಲೇ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಆದರೆ ಅಷ್ಟರಲ್ಲಿ ಮಗು ಮೃತಪಟ್ಟಿತ್ತು.

ಹತ್ತಿ ಬೆಳೆಗೆ ಸಿಂಪಡಣೆ ಮಾಡುವ ಔಷಧಿಯನ್ನು ಮಗುವಿಗೆ ಉಣಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಮಗುವನ್ನ ಬಿಮ್ಸ್ ಆಸ್ಪತ್ರೆ ಶವಗಾರಕ್ಕೆ ಶಿಫ್ಟ್ ಮಾಡಿ, ಮರಣೋತ್ತರ ಪರೀಕ್ಷೆಯ ಬಳಿಕವೇ ಮಗುವಿನ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಮಗು ಕಳೆದುಕೊಂಡ ತಾಯಿ ಹಾಗೂ ಕುಟುಂಬಸ್ಥರ ದುಃಖ ಮಡುಗಟ್ಟಿತ್ತು.

ಇನ್ನು ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಡಿಸಿಪಿ ನಾರಾಯಣ್ ಭರಮನಿ, ಬೆಳಗಾವಿ ಗ್ರಾಮೀಣ ಎಸಿಪಿ ಹಾಗೂ ಕಾಕತಿ ಸಿಪಿಐ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಮತ್ತೊಂದೆಡೆ ಆರೋಪ ಎದುರಿಸುತ್ತಿದ್ದ ಪತಿ ಭೀಮರಾಯ ನಾಪತ್ತೆ ಆಗಿದ್ದರು. ಬಂಧನಕ್ಕೆ ಪೊಲೀಸರು ಬಲೆ ಕೂಡ ಬೀಸಿದ್ದರು. ಅದರಂತೆಯೇ ಇಂದು ಆರೋಪಿ ತಂದೆಯನ್ನು  ಪೊಲೀಸರು ಬಂಧಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್