Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಕು ಬೆಕ್ಕು ಸಾವನ್ನಪ್ಪಿದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

Advertisement
ಲಖನೌ : ಪ್ರಾಣಿಗಳ ಮೇಲಿನ ಪ್ರೀತಿಯ ಆಘಾತಕಾರಿ ಪ್ರಕರಣವೊಂದು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಸಾಕು ಬೆಕ್ಕು ಸಾವನ್ನಪ್ಪಿದ ಬಳಿಕ ಅದನ್ನು ಮತ್ತೆ ಜೀವಂತಗೊಳಿಸುವ ಭರವಸೆಯಲ್ಲಿ ಮಹಿಳೆಯೊಬ್ಬಳು ಅದರ ಮೃತದೇಹವನ್ನು ಎರಡುದಿನಗಳವರೆಗೆ ತನ್ನ ಎದೆಯ ಬಳಿ ಇಟ್ಟುಕೊಂಡಿದ್ದಳು. ಬೆಕ್ಕು ಬದುಕುಳಿಯದಿದ್ದಾಗ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಹಿಳೆಯನ್ನು ಪೂಜಾ (32) ಎಂದು ಗುರುತಿಸಲಾಗಿದೆ. ಈಕೆ ಸುಮಾರು 8 ವರ್ಷಗಳ ಹಿಂದೆ ದೆಹಲಿ ನಿವಾಸಿ ಯುವಕನನ್ನು ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದಳು. ಇದಾದ ನಂತರ ಪೂಜಾ ತನ್ನ ಹೆತ್ತವರ ಮನೆಯಲ್ಲಿ ವಾಸಿಸುತ್ತಿದ್ದಳು. ಈ ವೇಳೆ ಒಂಟಿತನವನ್ನು ಹೋಗಲಾಡಿಸಲು ಪೂಜಾ ಒಂದು ಸಾಕು ಬೆಕ್ಕನ್ನು ಸಾಕಿದ್ದಳು.

ಆದರೆ ಬೆಕ್ಕು ಗುರುವಾರ ಸತ್ತುಹೋಗಿದೆ. ತಾಯಿ ಗಜ್ರಾ ದೇವಿ ಬೆಕ್ಕಿನ ದೇಹವನ್ನು ಹೂಳಲು ಹೋದಾಗ ಪೂಜಾ ನಿರಾಕರಿಸಿದರು. ತನ್ನ ಪ್ರೀತಿಯ ಬೆಕ್ಕು ಜೀವಂತವಾಗುತ್ತದೆ ಎಂದು ಹೇಳಿದ್ದಾಳೆ.

ತಾಯಿ ಗಜ್ರಾ ದೇವಿ ಪ್ರತಿಕ್ರಿಯಿಸಿ, ಎರಡು ದಿನಗಳಿಂದ ಬೆಕ್ಕಿನ ಮೃತ ದೇಹವನ್ನು ಎದೆಯ ಬಳಿ ಇಟ್ಟುಕೊಂಡಿದ್ದಳು. ಶನಿವಾರ ಮಧ್ಯಾಹ್ನ ತನ್ನ ಭರವಸೆಗಳು ಹುಸಿಯಾದಾಗ, ಪೂಜಾ ಮೂರನೇ ಮಹಡಿಯಲ್ಲಿರುವ ತನ್ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಳು. ಇತ್ತ ಮಗಳು ಬಾರದಿದ್ದರಿಂದ ಕೋಣೆಗೆ ಹೋಗಿ ನೋಡಿದಾಗ ನೇತಾಡುತ್ತಿರುವ ಆಕೆಯ ದೇಹವನ್ನು ನೋಡಿ ಕಿರುಚಿದೆ ಎಂದರು.

ಈ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಣಿ ಪ್ರೀತಿಯ ವಿಷಯವು ಇದೀಗ ಚರ್ಚೆಗೆ ಗ್ರಾಸವಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ