LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆಟೋ ಚಾಲಕನಿಗೆ ಚಪ್ಪಲಿಯಿಂದ ಥಳಿತ : ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಹಿಳೆ 

Advertisement
ಬೆಂಗಳೂರು: ಮೇ 31, 2025 ರಂದು ಬೆಂಗಳೂರಿನ ಬೆಳ್ಳಂದೂರು ಪ್ರದೇಶದಲ್ಲಿ ಉತ್ತರ ಭಾರತ ಮೂಲದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಈಗ, ಆ ಮಹಿಳೆ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿರುವ ವಿಡಿಯೊ ಕೂಡ ವೈರಲ್ ಆಗಿದೆ.ಘಟನೆಯ ಸಂದರ್ಭದಲ್ಲಿ, ಮಹಿಳೆಯು ಆಟೋ ತನ್ನ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಿದ್ದರು.

ಆದರೆ, ಆಟೋ ಚಾಲಕನು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನ್ನ ಮೇಲೆ ಯಾವುದೇ ತಪ್ಪಿಲ್ಲ ಎಂದು ವಾದಿಸಿದ್ದರು. ಈ ವಿಷಯದಿಂದ ಉಂಟಾದ ವಾಗ್ವಾದ ತೀವ್ರಗೊಂಡು, ಇಬ್ಬರ ನಡುವೆ ಕಿತ್ತಾಟಕ್ಕೆ ಕಾರಣವಾಯಿತು.

ಈ ಸಂದರ್ಭದಲ್ಲಿ ಆಟೋ ಚಾಲಕನು ವಿಡಿಯೊ ರೆಕಾರ್ಡ್ ಮಾಡಲು ಮುಂದಾದಾಗ, ಕುಪಿತಗೊಂಡ ಮಹಿಳೆ ಚಪ್ಪಲಿಯಿಂದ ಚಾಲಕನಿಗೆ ಸತತವಾಗಿ ಹೊಡೆದಿದ್ದರು.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರಿಂದ, ಕನ್ನಡಪರ ಸಂಘಟನೆಗಳು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು.

ಕೆಲವರು ಉತ್ತರ ಭಾರತೀಯರ ದರ್ಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ, ಆ ಮಹಿಳೆ ಕನ್ನಡಪರ ಸಂಘಟನೆಗಳ ಸಮ್ಮುಖದಲ್ಲಿ ಆಟೋ ಚಾಲಕನ ಕಾಲಿಗೆ ನಮಸ್ಕರಿಸಿ, ತಾನು ಮಾಡಿದ್ದು ತಪ್ಪು ಎಂದು ಕ್ಷಮೆಯಾಚಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ