Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷುಲ್ಲಕ ಕಾರಣಕ್ಕಾಗಿ ಯುವಕ ಕೊಲೆ

Advertisement

ಐನಾಪೂರಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಕಲ್ಲಿನಿಂದ ತಲೆಜಜ್ಜಿ ಕೊಲೆ ಮಾಡಿದ ಘಟನೆ  ಬೆಳಕಿಗೆ ಬಂದಿದೆ.

ಐನಾಪುರ : ಪಟ್ಟಣದ ಸಂತೋಶ ಸಿದ್ದಪ್ಪ ಕಮತೆ ಎಂಬ 33 ವರುಷದ ಯುವಕ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.
ಘಟನೆಯ ಹಿನ್ನೆಲೆ: ಸಂತೋಷ್ ಕಮತೆ ಅವರ ತೋಟದಲ್ಲಿ ಇದ್ದ ತೆಂಗಿನ ಮರಗಳಿಂದ ತೆಂಗಿನ ಕಾಯಿ ಕಿತ್ತು, ತನ್ನ ಇಬ್ಬರು ಗೆಳೆಯರೊಂದಿಗೆ ಉಗಾರ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡಿದ್ದರು. ಬಳಿಕ ಮೂವರೂ ಸೇರಿ ಬಾರ್ ನಲ್ಲಿ ಮದ್ಯಪಾನ ಮಾಡಿ ಐನಾಪುರಕ್ಕೆ ಹಿಂದಿರುಗುವ ವೇಳೆ, ಮಾರಾಟವಾದಹಣದಬಟವಾಡೆವಿಚಾರವಾಗಿ ವಾದ ವಿವಾದ ಆರಂಭಗೊಂಡಿದೆ. 
ಈ ವೇಳೆ ಉಳಿದ ಇಬ್ಬರು ಗೆಳೆಯರು ಸಂತೋಷ ಮೇಲೆ ಹಲ್ಲೆ ನಡೆಸಿ, ಬಳಿಕ ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಬೆಳಗಾವಿಯಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಥಣಿ ಡಿವೈಎಸ್ಪಿ ಪ್ರಶಾಂತ ಮುನ್ನೋಳ್ಳಿ, ಸಿಪಿಐ ಸಂತೋಷ ಹಳ್ಳೂರ ಹಾಗೂ ಪಿಎಸ್‌ಐ ರಾಘವೇಂದ್ರ ಖೋತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕ್ಷುಲ್ಲಕ ಕಾರಣಕ್ಕಾಗಿ ನಡೆದ ಈ ಕೊಲೆ ಘಟನೆ ಐನಾಪುರ ಹಾಗೂ ಉಗಾರ ಪರಿಸರದಲ್ಲಿ ದಿನವಿಡೀ ಆತಂಕದ ವಾತಾವರಣ ಸೃಷ್ಟಿಸಿದೆ.
ವರದಿ :ಮುರಗೇಶ ಗಸ್ತಿ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೆಸ್ಟ್ ಕ್ರಿಕೆಟ್: ಇನ್ನಿಂಗ್ಸ್ ಮುನ್ನಡೆಯತ್ತ ನ್ಯೂಜಿಲೆಂಡ್ಸಿದ್ದರಾಮಯ್ಯನವರ ಕಣ್ಣಿರಲ್ಲಿ ಕಾಂಗ್ರೆಸ್ ತೊಳೆದುಹೋಗುತ್ತೆ – ಛಲವಾದಿ ನಾರಯಣಸ್ವಾಮಿಇಂಗ್ಲೆAಡ್- ಭಾರತ ಮೊದಲ ಟ್ವೆಂಟಿ-೨೦ ಇಂದುಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಿ : ಶೃತಿ, ಸಂತೋಷ ಬಿ.ಜಿ. ಪಾಟೀಲಡಿವೈಎಸ್ಪಿ ಬಡ್ತಿಗೂ ನೇಣಿಗೆ ಶರಣಾದ ಸಿಪಿಐ : ಆನ್‌ಲೈನ್ ಗೇಮ್ ಗೆ ಬಲಿಯಾದ್ರ ಅಧಿಕಾರಿ? ಮುಂದಿನ 8 ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಅಲ್ಲಾಡಿಸಲು ಸಾಧ್ಯವಿಲ್ಲ : ದ್ವಾರಕನಾಥ್ ಗುರೂಜಿಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ BIG NEWS : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಮನವಿಗೆ ಸ್ಪಂದಿಸಿದ ಅಧಿಕಾರಿಗಳುಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿದ್ದರಾಮಯ್ಯ