LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್

Advertisement

ಹರಿತವಾದ ಆಯುಧದಿಂದ ಹೊಟ್ಟೆಗೆ ಇರಿತ; ಆರೋಪಿಗಳು ಪೋಲಿಸರ ವಶಕ್ಕೆ.

ನಿಪ್ಪಾಣಿ : ಬೆಳಗಾವಿ ಜಿಲ್ಲೆಯ  ನಿಪ್ಪಾಣಿ ನಗರದ ಜತ್ರಾಟ್ ವೆಸ್ ಪ್ರದೇಶದ ಚರ್ಮಕಾರರ ಗಲ್ಲಿಯಲ್ಲಿ ಸಣ್ಣಪುಟ್ಟ ವಿವಾದವೊಂದು ಸಣ್ಣ ಜಗಳ ದಿಂದ  ವಿಕೋಪಕ್ಕೆ ತಿರುಗಿ, ಯುವಕನೊಬ್ಬನನ್ನು ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಘಟನೆ ನಡೆದಿದೆ. ಈ ಘಟನೆಯಲ್ಲಿ ಅಭಿಷೇಕ್ ಅನಿಲ ಬಾಮನೆ ಎಂಬ ಯುವಕ ಮೃತಪಟ್ಟಿದ್ದಾನೆ ಮೃತ ಅಭಿಷೇಕ್ ಅವರು ಚರ್ಮದ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

news_1789807877_0_308.webp

 

ಪಡೆದ ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರು ಯುವಕರ ನಡುವೆ ಸಣ್ಣಪುಟ್ಟ ಕಾರಣಕ್ಕೆ ವಾಗ್ವಾದ ನಡೆದಿತ್ತು. ಬಳಿಕ ವಾಗ್ವಾದವು ಜಗಳಕ್ಕೆ ತಿರುಗಿದ್ದು, ಈ ವೇಳೆ ಅಭಿಷೇಕ್ ಬಾಮನೆ ಅವರ ಹೊಟ್ಟೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ಪ್ರಯತ್ನ ನಡೆದರೂ, ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಬ್ಬದ ಸಂಭ್ರಮದ ನಡುವೆಯೇ ಈ ಘಟನೆ ನಡೆದಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

 ಈ ಘಟನೆಯ ಮಾಹಿತಿ ದೊರೆತ ತಕ್ಷಣ ನಿಪ್ಪಾಣಿ ನಗರ ಪೋಲೀಸರು ಸ್ಥಳಕ್ಕೆ ಧಾವಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ .

ಈ ಕುರಿತು ನಿಪ್ಪಾಣಿ ನಗರ ಪೋಲೀಸರು ತನಿಖೆಯನ್ನು ಮುಂದುವರಿಸಿದ್ದು, ಕೊಲೆಗೆ ನಿಖರವಾದ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ತನಿಖೆಯ ನಂತರ ಸ್ಪಷ್ಟವಾಗಬೇಕಿದೆ ಇನ್ನು ಯಾವುದೇ ರೀತಿಯ ಅಧಿಕೃತ ತನಿಖೆಯ ಮಾಹಿತಿ ಬಂದ ಬಳಿಕ ನಿಜವಾದ ಬಣ್ಣ ಬಯಲಿಗೆ ಬರಲಿದೆ.

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು