Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದಿ ಕೈಬಿಟ್ಟಿರುವುದು ಸ್ವಾಗತರ್ಹ : ಸಂಜು ಬಡಿಗೇರ

Advertisement
ಚಿಕ್ಕೋಡಿ : ಕರ್ನಾಟಕ ಸರ್ಕಾರದ ಶಿಕ್ಷಣ ಕ್ಷೇತ್ರದಲ್ಲಿ ದ್ವಿಭಾಷೆ ನೀತಿ ಜಾರಿ ಮಾ ಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಹಿಂದಿ ಭಾಷೆಯನ್ನು ಕೈಬಿಟ್ಟಿರೋದು ಸ್ವಾಗತರ್ಹವೆಂದು ತಾಲೂಕ ಕರವೇ ಅಧ್ಯಕ್ಷ ಸಂಜು ಬಡಿಗೇರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಯುತರು ಮಾತನಾಡಿ ರಾಜ್ಯದಲ್ಲಿ ಕನ್ನಡದ ಮಕ್ಕಳಿಗೆ ಒತ್ತಾಯದ ಹಿಂದಿ ಭಾಷೆ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಕಳೆದು 15 ವರ್ಷಗಳಿಂದ ಸತತವಾಗಿ ಹೋರಾಟ ಮಾಡುತ್ತಾ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆರುತ್ತಾ ಬಂದಿದೆ. ಆ ಹೋರಾಟದ ಪರಿಣಾಮದಿಂದ ಕರವೇಯ ಅನೇಕ ಹೋರಾಟಗಾರರ ಮೇಲೆ ಸಾಕಷ್ಟು ಕೇಸು ಕಟಲೆ ಪ್ರಕರಣಗಳು ದಾಖಲಾಗಿದ್ದು ಅಲ್ಲದೆ ಅನೇಕ ಹೋರಾಟಗಾರರು ಜೈಲುವಾಸವನ್ನು ಕೂಡ ಅನುಭವಿಸಿರುತ್ತಾರೆ.

ಅಲ್ಲದೆ ಕೇಂದ್ರ ಸರ್ಕಾರ ಬಹುತೇಕ ದಕ್ಷಿಣದ ರಾಜ್ಯಗಳಲ್ಲಿ ಹಿಂದಿ ಭಾಷೆಯನ್ನು ಒತ್ತಾಯ ಪೂರ್ವಕವಾಗಿ ಏರಿಕೆ ಹೇಳಿಕೆ ಮಾಡಲು ಹೊರಟಿದ್ದು. ಈದಕ್ಕೆ ವಿರೋಧಿಸಿ ಅದಕ್ಕೆ ತಕ್ಕ ಉತ್ತರ ನೀಡಲು ಪರೀಕ್ಷಾ ಸಂದರ್ಭದಲ್ಲಿ ಹಿಂದಿ ಭಾಷೆ ಪರೀಕ್ಷೆ ವಿರೋಧಿಸಿ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವ ವಿನೂತನ ಹೋರಾಟಕ್ಕೆ ವೇದಿಕೆಯ ಕಾರ್ಯಕರ್ತರು ಮುಂದಾಗಿದ್ದರು. ಆದರೆ ಈಗ ನಮ್ಮ ಕರ್ನಾಟಕ ಘನ ರಾಜ್ಯ ಸರ್ಕಾರ ಇತಿಹಾಸದಲ್ಲಿ ಇದೇ ಮೊದಲು ಬಾರಿಗೆ ಹಿಂದಿ ಭಾಷಾಂಕಗಳನ್ನು ಪರಿಗಣನೆ ಮಾಡದೆ ದ್ವಿಭಾಷಾ ನೀತಿಗೆ ಒಲವು ವ್ಯಕ್ತಪಡಿಸಿರುವುದು ಸ್ವಾಗತರ್ಹವಾಗಿದೆ ರಾಜ್ಯದ ಈ ನಿಲುವಿನ ಜೋತೆ ರಾಜ್ಯದ ಆಡಳಿತರೂಡ ಇತರೆ ಎಲ್ಲಾ ವಲಯದಲ್ಲಿ ಎಲ್ಲಾ ಹಂತದಲ್ಲೂ ಕನ್ನಡ ಭಾಷೆಗೆ ಸೂಕ್ತ ಮುನ್ನಡೆ ಸಿಗುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕು ಇಲ್ಲದೆ ಇದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಾರಾಯಣಗೌಡರು ನೇತೃತ್ವದಲ್ಲಿ ರಾಜ್ಯದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿ ಪರಿಣಾಮಕಾರಿಯಾಗಿ ಜಾರಿಯಾಗುವ ನಿಟ್ಟಿನಲ್ಲಿ ಮತ್ತಷ್ಟು ಉಗ್ರ ಹೋರಾಟ ರೂಪಿಸಲಾಗುವುದು ಸರ್ಕಾರ ಇದಕ್ಕೆ ಆಸ್ಪದ ನೀಡದೆ ತಾವುಗಳು ಹೊರಡಿಸಿದ ಸುತ್ತೋಲೆಗಳಲ್ಲಿ ಸ್ಪಷ್ಟಪಡಿಸಿದ್ದನ್ನೆ ಪರಿಣಾಮಕಾರಿಯಾಗಿ ಕಾರ್ಯರೂಪಗೊಳಿಸಿ ಜಾರಿಗೆ ತರಬೇಕೆಂದು ಶ್ರೀ ಸಂಜು ಬಡಿಗೇರವರು ಆಗ್ರಹಿಸಿದರು.

ವರದಿ : ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ