Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿಷೇಕ್ ಅಂಬರೀಶ್ ಮಗನ ನಾಮಕರಣ

Advertisement
ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ  ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅದ್ಧೂರಿಯಾಗಿ ನೆರವೇರಿದೆ.

ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಈ ನಾಮಕರಣ ಮಹೋತ್ಸವದಲ್ಲಿ ಭಾಗಿ ಆಗಿದ್ದರು. ಹಲವು ಕಾರಣಗಳಿಗೆ ಇಂದಿನ ನಾಮಕರಣ ಮಹೋತ್ಸವ ಗಮನ ಸೆಳೆದಿತ್ತು. ಇದೀಗ ಮಗುವಿನ ಹೆಸರು ರಿವೀಲ್ ಆಗಿದೆ.

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಡಲಾಗಿದೆ. ಪವರ್​ಫುಲ್ ಹೆಸರನ್ನೇ ಮಗನಿಗೆ ಆಯ್ಕೆ ಮಾಡಿದ್ದಾರೆ ದಂಪತಿ. ಇದರಲ್ಲಿ ಅಮರ್ ಎಂಬುದು ಅಂಬರೀಶ್ ಅವರ ಹೆಸರು. ಅಂಬರೀಶ್ ಅವರ ಮೂಲ ಹೆಸರು ಅಮರ್​ನಾಥ್. ಅವರ ಮೂಲ ಹೆಸರನ್ನೇ ಮಗನಿಗೆ ಇರಿಸಿದ್ದಾರೆ ಅಭಿಷೇಕ್ ಅಂಬರೀಶ್. ರಾಣಾ ಎಂದರೆ ರಾಜ, ಮಹಾಯೋಧ ಎಂದೆಲ್ಲ ಅರ್ಥವಿದೆ. ವಿಶೇಷವಾಗಿ ರಜಪೂತರು ತಮ್ಮ ರಾಜರನ್ನು ರಾಣಾ ಎಂದೇ ಕರೆಯುತ್ತಿದ್ದರು. ಅರೆಬಿಕ್ ಭಾಷೆಯಲ್ಲಿ ರಾಣಾ ಎಂದರೆ ಸುಂದರ ಎಂಬ ಅರ್ಥವೂ ಇದೆ.

ಇನ್ನು ಇಂದಿನ ನಾಮಕರಣ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಭಾಗಿ ಆಗಿದ್ದಾರೆ. ಮಂಡ್ಯ ಸೇರಿದಂತೆ ಬೆಂಗಳೂರಿನ ಕೆಲವು ರಾಜಕಾರಣಿಗಳು ಸಹ ನಾಮಕರಣ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ. ನಟ ದರ್ಶನ್ ಸಹ ಇಂದಿನ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ವರೆಗೆ ದರ್ಶನ್, ನಾಮಕರಣಕ್ಕೆ ಆಗಮಿಸಿದ ಸುದ್ದಿ ಇಲ್ಲ. ದರ್ಶನ್ ಮತ್ತು ಸುಮಲತಾ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು ಇದೇ ಕಾರಣಕ್ಕೆ ದರ್ಶನ್, ನಾಮಕರಣದಲ್ಲಿ ಭಾಗವಹಿಸಿಲ್ಲ ಎನ್ನಲಾಗುತ್ತಿದೆ.

ಕಳೆದ ವರ್ಷ ಅಂದರೆ 2024ರ ನವೆಂಬರ್ 12 ರಂದು ಈ ಜೋಡಿಗೆ ಗಂಡು ಮಗು ಜನಿಸಿತು. ಇದೀಗ ಇದೇ ಮಗುವಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಡಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ