LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನೈರ್ಮಲ್ಯ ಉಪ ವಿಭಾಗ ಅಧಿಕಾರಿಗಳಿಂದ ಅಧಿಕಾರ ದುರುಪಯೋಗ

Advertisement
ಸಿಂಧನೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಸಿಂಧನೂರಿನ ಕಿರಿಯ ಅಭಿಯಂತರಾದ ನಾಗರಾಜ್ ಪ್ರಭಾ ಯಾವುದೇ ಲಿಖಿತ ಆದೇಶವಿಲ್ಲದೆ ಸರ್ಕಾರಿ ಕಾರ್ಯಪಾಲಕ ಅಭಿಯಂತರ ಹುದ್ದೆಯ ಅಧಿಕಾರ ಚಲಾಯಿಸಿ ಅಧಿಕಾರ ದುರ್ಬಳಕೆ ಹಾಗೂ ಆರ್ಥಿಕ ಅವ್ಯವಹಾರ ಪ್ರಕರಣದ ಕುರಿತು ಸಲ್ಲಿಸಲಾದ ದೂರುಗಳ ಬಗ್ಗೆ ಸೇವಾ ನಿಯಮಾನುಸಾರ ವರದಿ ಮಾಡದೆ ನಿರ್ಲಕ್ಷ್ಯ ತೋರಿರುವ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಡಿ. ವಿಜಯಲಕ್ಷ್ಮೀ ಅವರ ವಿರುದ್ಧ ಗಂಭೀರ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಲಾಯಿತು.

ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವಿಷಯದ ಕುರಿತು ಸಮಗ್ರ ತನಿಖೆ ನಡೆಸಿ, ಎಲ್ಲಾ ದಾಖಲೆಗಳನ್ನು ಪರಿಶೀಲಿಸಲು ಆದೇಶಿಸಬೇಕು. ಕಿರಿಯ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಬೇಕು. ಡಿ. ವಿಜಯಲಕ್ಷ್ಮೀ ಹಾಗೂ ಶ್ರೀ ಪ್ರಕಾಶ ಅವರ ವಿರುದ್ಧ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಸಿಸಿಎ, ನಿಯಮಗಳಡಿ ಶಿಸ್ತು ಕ್ರಮ ಪ್ರಾರಂಭಿಸಬೇಕು ನಾಗರಾಜ ಪ್ರಭಾ ಅವರ ವಿರುದ್ಧ ಆರ್ಥಿಕ ಅವ್ಯವಹಾರ ಮತ್ತು ದಾಖಲೆ ಕೃತಕತೆ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಲೋಕಾಯುಕ್ತ/ಉಪಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು.ಆರ್ಥಿಕ ನಷ್ಟವಿದ್ದಲ್ಲಿ ವಸೂಲಿ ಕ್ರಮ ಕೈಗೊಳ್ಳಬೇಕು.ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು/ಸ್ಥಳಾಂತರ ಮಾಡಬೇಕೆಂದು ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಚನ್ನಬಸವ ಅಮಿನಗಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಾಧಿಕ್ ಮೇಸ್ತ್ರಿ , ತಾಲೂಕು ಗೌರವಧ್ಯಕ್ಷ ಯಮನಪ್ಪ, ತಾಲೂಕು ಅಧ್ಯಕ್ಷ ವಿರುಪಾಕ್ಷಿ ಸಾಸಲಮರಿ, ಉಪಾಧ್ಯಕ್ಷ ಶರೀಫ್ ಸೇರಿದಂತೆ ಅನೇಕರು ಇದ್ದರು.

ವರದಿ : ಬಸವರಾಜ ಬುಕ್ಕನಹಟ್ಟಿ. 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ