Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಮೋಟಾರ ಸೈಕಲ್ ಕಳ್ಳತನ ಪ್ರಕರಣದಲ್ಲಿ ಆರೋಪಿತನ ಬಂಧನ

Advertisement
ಬೆಳಗಾವಿ:  ನಗರದ ವಿವಿಧ ಠಾಣೆಗಳಲ್ಲಿ ದಾಖಲಾದ ಮೋಟಾರ ಸೈಕಲ್ ಕಳ್ಳತನ ಪ್ರಕರಣಗಳಿಗೆ ಸಂಬಂದಿಸಿದಂತೆ ಮಾನ್ಯ ಪೊಲೀಸ್ ಆಯುಕ್ತರು ಶ್ರೀ ಯಡಾ ಮಾರ್ಟಿನ್ ಮಾರ್ಬನ್ಯಾ ಗ್ ಬೆಳಗಾವಿ ನಗರ, ಸ್ನೇಹ ಪಿ ವಿ ಉಪ-ಪೊಲೀಸ್ ಆಯುಕ್ತರು (ಅ&ಸಂ) ಬೆಳಗಾವಿ ನಗರ, ಮತ್ತು ಗಂಗಾಧರ ಬಿ ಎಮ್ ಸಹಾಯಕ ಪೊಲೀಸ್ ಆಯುಕ್ತರು ಬೆಳಗಾವಿ ಗ್ರಾಮೀಣ ಉಪ-ವಿಭಾಗರವರ ಮಾರ್ಗದರ್ಶನದಲ್ಲಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಇನ್ಸಪೆಕ್ಟರ ರವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡವು ದಿನಾಂಕ:12/07/2024 ರಂದು ಆರೋಪಿತನಾದ ಆಜಾದ್ ಮೆಹಬೂಬಸುಭಾನಿ ಕೀಲ್ಲೆದಾರ ಸಾ : ತಿಗಡಿ ತಾ : ಬೈಲಹೊಂಗಲ ಇವನಿಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 62/2024 ಕಲಂ 379 IPC ನೇದ್ದರಲ್ಲಿ ದಸ್ತಗಿರಿ ಮಾಡಿ ಈತನಿಂದ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಒಂದು ಮೋಟಾರ್ ಸೈಕಲ್ ಮತ್ತು ಬೇರೆ ಬೇರೆ ಠಾಣಾ ಹದ್ದಿಯ 4 ಮೋಟಾರ್ ಸೈಕಲ್ ಗಳನ್ನು ಹೀಗೆ ಒಟ್ಟು 150000/-ರೂ ಕಿಮ್ಮತ್ತಿನ 5 ಹೀರೊ ಕಂಪನಿಯ ಮೋಟಾರ್ ಸೈಕಲ್ ಗಳನ್ನು ಜಪ್ತ ಮಾಡಿ ವಶಕ್ಕೆ ಪಡೆದುಕೊಂಡಿದ್ದು ಇರುತ್ತದೆ.

ಸದರಿ ತನಿಖಾತಂಡದಲ್ಲಿ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ ರವರಾದ ಶ್ರೀ ಟಿ ಬಿ ನೀಲಗಾರ ಪಿ.ಎಸ್.ಐ ಎಸ್ ಆರ್ ಮುತ್ತತ್ತಿ ಮತ್ತು ಅವಿನಾಶ್ ಎ ವೈ , ಸಿ ಎಚ್ ಸಿ ಗಳಾದ ಅರುಣ ಕಾಂಬಳೆ , ಸಿಪಿಸಿಗಳಾದ ಎಸ್ ಬಿ ಬಾಬಣ್ಣವರ, ಪ್ರಭಾಕರ ಭೂಸಿ, ರಾಜು ಕೆಳಗಿನಮನಿ ತಾಂತ್ರಿಕ ವಿಭಾಗದ ಸಿಬ್ಬಂದಿವರಾದ ರಮೇಶ್ ಅಕ್ಕಿ, ಮಹದೇವ್ ಕಾಶಿದ್ ರವರ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ನಗರ ರವರು ಶ್ಲಾಘಿಸಿ ಬಹುಮಾನ ಘೋಷಿಸಿರುತ್ತಾರೆ

.
ವರದಿ ಮಹಾಂತೇಶ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ