Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಒಂದಾಗಲೂ ಒಪ್ಪಿದ ನಟ ಅಜಯ್ ರಾವ್ ದಂಪತಿ 

Advertisement
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಸುದ್ದಿ ಅಭಿಮಾನಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಆಘಾತವನ್ನುಂಟು ಮಾಡಿತ್ತು. ಆದರೆ ಇದೀಗ ಸ್ವತಃ ಅಜಯ್ ರಾವ್ ಪತ್ನಿ ಸ್ವಪ್ನಾ ರಾವ್ ತಾವು ಮತ್ತೆ ಒಂದಾಗುವುದಾಗಿ ತಿಳಿಸುವ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ.

ಅಜಯ್ ರಾವ್ ಪತ್ನಿ ಸ್ವಪ್ನಾ, ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಅಲ್ಲದೇ ಕೌಟುಂಬಿಕ ದೌರ್ಜನ್ಯ ಕೇಸ್ ಕೂಡ ದಾಖಲಿಸಿದ್ದರು.

ಈ ಘಟನೆ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸ್ವಪ್ನಾ ರಾವ್ ತಾವು ಮತ್ತೆ ಒಂದಾಗುತ್ತಿರುವುದಾಗಿ ಹಾಗೂ ಹೊಂದಾಣಿಕೆಯಿಂದ ಜೀವನ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ. ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ.

ಪ್ರಿಯ ಸ್ನೇಹಿತರೇ ಹಾಗೂ ಸಹೋದರರೇ, ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್ ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ಸ್ಥಾಪಿಸಲು ನಿಮ್ಮ ಹಾರೈಕೆಗಳು ಹಾಗೂ ಪ್ರಾರ್ಥನೆಗಳನ್ನು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ.

ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನಂದರೆ ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತ್ತೇನೆ. ಕೃತಜ್ಞತೆಗಳೊಂದಿಗೆ ಸ್ವಪ್ನಾ ಅಜಯ್ ರಾವ್ ಎಂದು ಬರೆದುಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ