ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೀಡಾಗಿ ಇಂದಿಗೆ ಎರಡು ವರ್ಷ. ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ.
ನಟ ದರ್ಶನ್ ತನ್ನ ಗೆಳತಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಸಿದ ಎಂಬ ಕಾರಣಕ್ಕೆ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಯನ್ನು ಅಪಹರಿಸಿ, ಕೂಡಿಟ್ಟು ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ಆರೋಪವಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.
ದರ್ಶನ್ ಬಂಧನವಾಗಿ ಇಂದಿಗೆ ಎರಡು ವರ್ಷ. ಅವರು ಜೈಲು ಸೇರಿ ಎರಡು ವರ್ಷಗಳಾಗಿದ್ದರೂ ಮಧ್ಯದಲ್ಲಿ ಎಂಟು ತಿಂಗಳ ಕಾಲ ಚಿಕಿತ್ಸೆ ನೆಪವೊಡ್ದಿ ಜೈಲಿನಿಂದ ಹೊರಗಿದ್ದರು.
ಬಳಿಕ ಮತ್ತೆ ಜೈಲುಸೇರಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್ನಲ್ಲಿ ಜಾಮೀನು ಕೈತಪ್ಪಿದ ಬಳಿಕ ನಟ ದರ್ಶನ್ ಜೈಲಿನಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಪುಸ್ತಕಗಳನ್ನು ಓದುವುದರಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.


