ಬೆಂಗಳೂರು: ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನುಬದ್ಧವಾಗಿ ಅಂತ್ಯವಾಗಿದೆ.
ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿರುವ ಹೈಕೋರ್ಟ್ ವಿಭಾಗೀಯ ಪೀಠ, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ.
ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಅಧಿಕೃತ ತೆರೆ ಬಿದ್ದಿದೆ.
ಇಬ್ಬರ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ವಿಚ್ಛೇದನ ಮಂಜೂರು ಮಾಡುವುದರ ಜೊತೆಗೆ, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ಪಾವತಿಸುವಂತೆ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಇಬ್ಬರ ಹಣಕಾಸಿನ ಸ್ಥಿತಿ, ದುನಿಯಾ ವಿಜಯ್ ಅವರ ಸಾಮಾಜಿಕ ಹಾಗೂ ವೃತ್ತಿಪರ ಸ್ಥಾನಮಾನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಜೀವನಾಂಶದ ಮೊತ್ತವನ್ನು ನ್ಯಾಯಪೀಠ ನಿಗದಿಪಡಿಸಿದೆ ಎಂದು ವರದಿಯಾಗಿದೆ. ಅಲ್ಲದೆ, ದಂಪತಿಗೆ ಇರುವ ಮೂವರು ಮಕ್ಕಳ ಜವಾಬ್ದಾರಿಯನ್ನೂ ಗಮನದಲ್ಲಿಟ್ಟುಕೊಂಡು ಕೋರ್ಟ್ ಈ ಆದೇಶ ನೀಡಿದೆ.


