ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದು, (ಜೂನ್ 20) ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳಲ್ಲಿ ಆತಂಕ ಮೂಡಿದೆ.
ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಶನಿವಾರ ಮನೆಯಲ್ಲಿದ್ದಾಗ ನಟ ವಿನೋದ್ ಪ್ರಭಾಕರ್ ಅವರಿಗೆ ಇದ್ದಕ್ಕಿದ್ದಂತೆ ರಕ್ತದೊತ್ತಡ (Blood Pressure) ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದೆ.
ತಕ್ಷಣವೇ ಅವರ ಆರೋಗ್ಯದಲ್ಲಿ ತೀವ್ರ ಬದಲಾವಣೆ ಉಂಟಾದ ಹಿನ್ನೆಲೆಯಲ್ಲಿ, ಗಾಬರಿಗೊಂಡ ಕುಟುಂಬದ ಸದಸ್ಯರು ತಡಮಾಡದೆ ಅವರನ್ನು ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.


