ಈ ಬಗ್ಗೆ ಕೊಪ್ಪಳದಲ್ಲಿ ಮಾತನಾಡಿದ ಅವರು, ನಾನು ಸಿದ್ದರಾಮಯ್ಯರನ್ನು ಮಾತ್ರ ನಮ್ಮ ನಾಯಕ ಎಂದು ಒಪ್ಪಿಕೊಂಡಿದ್ದೇನೆ.
ಇನ್ನು ರಾಹುಲ್ ಗಾಂಧಿ, ಸೋನಿಯಾಗಾಂಧಿಯನ್ನು ಕೂಡಾ ನಾನು ನಮ್ಮ ನಾಯಕರು ಅಂತ ಒಪ್ಪಿಕೊಂಡಿಲ್ಲ ಎನ್ನುವ ಮೂಲಕ ಅನ್ಸಾರಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.
ನಮ್ಮ ಮುಸಲ್ಮಾನರು ಸಿದ್ದರಾಮಯನವರ ಬಳಿ ಪ್ರತಿ 6 ತಿಂಗಳಿಗೊಮ್ಮೆ ಹೋಗಬೇಕು. ನೂರು ಕೋಟಿ ರೂ. ಅನುದಾನ ತಂದು, ಸಮಾಜದ ಕೆಲಸಗಳನ್ನ ಮಾಡಿಕೊಳ್ಳಬೇಕು ಎಂದಿದ್ದಾರೆ.
ಬಿಜೆಪಿಯವರು ವಕ್ಫ್ ಆಸ್ತಿಗಾಗಿ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ, ನಮ್ಮ ರಾಜ್ಯದಲ್ಲಿ ಮುಸಲ್ಮಾನರ ಸಂಖ್ಯೆ ಎರಡನೇ ಸ್ಥಾನದಲ್ಲಿದ್ದೇವೆ,ಆದರೆ ಮುಸ್ಲಿಂ ಶತ್ರು ದೇಶ ಪಾಕಿಸ್ತಾನದ ಪರವಾಗಿ ಮಾತನಾಡುವುದಿಲ್ಲ,ನಾವು ಇಲ್ಲಿ ಹುಟ್ಟಿದ್ದೇವೆ ಇಲ್ಲಿಯೇ ಸಾಯಿಯುತ್ತೇವೆ ಎಂದಿದ್ದಾರೆ.

