ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಐಗಳಿ ಪೊಲೀಸರು 24 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಲೇಜಿನ ಗೇಟ್ ಹಾಗೂ ಕೊಠಡಿಯ ಬೀಗ ಮುರಿದು ಲ್ಯಾಪ್ಟಾಪ್ ಮತ್ತು ಪ್ರೊಜೆಕ್ಟರ್ ಕಳ್ಳತನ ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಐಗಳಿ ಠಾಣೆ ಪೊಲೀಸರು ತನಿಖೆ ನಡೆಸಿ ದರ್ಶನ ಹೊನಕಾಂಬಳೆ (19) ಹಾಗೂ ರಾಕೇಶ ಹೊನಕಾಂಬಳೆ (22) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ₹1 ಲಕ್ಷ ಮೌಲ್ಯದ ಲ್ಯಾಪ್ಟಾಪ್ ಹಾಗೂ ಪ್ರೊಜೆಕ್ಟರ್ ಸೇರಿದಂತೆ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಪೊಲೀಸರ ತ್ವರಿತ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ವರದಿ : ಅಜಯ ಕಾಂಬಳೆ

