Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾನ ನಿಲ್ದಾಣ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ

Advertisement
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ವಿಸ್ತರಣೆಯಲ್ಲಿ ಜಮೀನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ನಿವೇಶನದಾರರಿಗೆ ನಿವೇಶನ ಹಾಗೂ ಅಕ್ರಮ-ಸಕ್ರಮ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಂತೆ ಹುಬ್ಬಳ್ಳಿ ವಿಮಾನ ನಿಲ್ದಾಣ ಸಂತ್ರಸ್ತರ ಒಕ್ಕೂಟದ ಆಗ್ರಹಿಸಿದೆ.

ಈ ಕುರಿತು ನಗರದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ರಘೋತ್ತಮ ಕುಲಕರ್ಣಿ ನಿವೇಶನ ಕಳೆದುಕೊಂಡವರಿಗೆ ಹಾಗೂ ಅತೀ ಕಡುಬಡವ ಸಂತ್ರಸ್ತರಿಗೂ ಪುನರ್ವಸತಿ ಕಲ್ಪಿಸಿಕೊಟ್ಟು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸರ್ಕಾರ ಹಾಗೂ ಹೈಕೋರ್ಟ್‌ಗೂ ತಪ್ಪು ಮಾಹಿತಿ ಕೊಟ್ಟಿದ್ದರಿಂದ ಸಂತ್ರಸ್ತರು ಪುನರ್ವಸತಿ ನಿವೇಶನ ಪಡೆಯದೇ ಇರುವಂತಾಗಿದೆ. ಹೈಕೋರ್ಟ್ ಆದೇಶವಿದ್ದರೂ ನಿವೇಶನವನ್ನು ವಿತರಿಸದೇ ಆದೇಶವನ್ನು ಪಾಲಿಸಿರುವುದಿಲ್ಲ ಎಂದು ದೂರಿದರು.
ಸಂತ್ರಸ್ತರಿಗೆ ಕೆ.ಐ.ಎ.ಡಿ.ಬಿ. ಯವರು ಉಣಕಲ್ ಗ್ರಾಮದ ಸರ್ವೇ ನಂ ೫೯೪ ಬ ದಲ್ಲಿ ಬರುವ ನಿವೇಶನಕ್ಕೆ ೨೦೦೮ ರಲ್ಲಿ ಪ್ರತಿ ಚದರ ಅಡಿಗೆ ೬೦೦ ರೂ. ಅಂತ ಪರಿಹಾರ ವಿತರಿಸಿ ಅದೇ ಸರ್ವೇ ನಂಬರಿನಲ್ಲಿ ಬರುವ ನಿವೇಶನಗಳಿಗೆ ೨೦೧೧-೧೨ ರಲ್ಲಿ ೪೫೦ ರೂ. ಎಂದು ನಿಗದಿಪಡಿಸಿದ್ದು ಎಷ್ಟು ಸರಿ. ಸಂತ್ರಸ್ತರಿಗೆ ೪೫೦ ರೂ. ಪರಿಹಾರ ಕೊಟ್ಟು ಪುನರ್ವಸತಿ ಎಂದು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಮಾಡಿ ನಿವೇಶನದ ಬೆಲೆಯನ್ನು ಪ್ರತಿ ಚದರ ಅಡಿಗೆ ೪೮೫ ರೂ. ಎಂದು ನಿಗದಿಪಡಿಸಿದ್ದು ಯಾವ ನ್ಯಾಯ ಎಂದು ಪ್ರಶ್ನಿಸಿದರಲ್ಲದೇ, ಕೂಡಲೇ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಸ್.ಎ. ಜಹಾಗೀರದಾರ, ಐ.ಬಿ. ಚಡಿಹಾಳ, ಎಂ.ಜಿ. ರಾಯ್ಕರ, ಆರ್.ಎಂ. ಅಣ್ವೇಕರ, ಗುರುನಾಥ ಎಲಿವಾಳ, ಬಸವರಾಜ ಖಾನಾಪುರ ಸೇರಿದಂತೆ ಹಲವಾರು ಸಂತ್ರಸ್ತರು ಪಾಲ್ಗೊಂಡಿದ್ದರು.

ವರದಿ: ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ