LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ಪ್ರತಿಭಟನೆ

Advertisement
ತುರುವೇಕೆರೆ: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಫೆಡರೇಷನ್ ತಾಲ್ಲೂಕು ಘಟಕ ನೌಕರರ ಸಂಘ (ಸಿಐಟಿಯು) ಇಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕು ಅಂಗನವಾಡಿ ನೌಕರರುಗಳು ಈ ದಿನ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಎಫ್.ಆರ್.ಎಸ್. ಪದ್ಧತಿಯಿಂದ ಇಕೆವೈಸಿ, ಒಟಿಪಿ ಸೇರಿದಂತೆ ಹಲವು ತಾಂತ್ರಿಕ ತೊಂದರೆಗಳಾಗುತ್ತಿದೆ. ಇದನ್ನು ಪರಿಹರಿಸದೆ ಅಧಿಕಾರಿಗಳು ಕಾರ್ಯಕತೆಯರ ಗೌರವಧನ ಕಡಿತ, ನೋಟೀಸ್ ನೀಡುವ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿದ ಪ್ರತಿಭಟನಾಕಾರರು, ಅಂಗನವಾಡಿಯಲ್ಲಿ ನಿವೃತ್ತರಾದವರಿಗೆ ಕನಿಷ್ಠ 10 ಸಾವಿರ ಪಿಂಚಣಿ ನೀಡಬೇಕು. ಹಾಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಗೌರವಧನ ಹೆಚ್ಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ನಿವೃತ್ತಿಯ ವಯಸ್ಸನ್ನು 65 ವರ್ಷಕ್ಕೆ ಹೆಚ್ಚಳ ಮಾಡಬೇಕು. ಕಾರ್ಮಿಕರ ಹಿತಕ್ಕೆ ಮಾರಕವಾಗಿರುವ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆದು ಹಿಂದೆ ಇದ್ದ ಕಾನೂನನ್ನೇ ಪುನರ್ ಸ್ಥಾಪಿಸಬೇಕು. ನ್ಯಾಯಾಲಯದ ತೀರ್ಪಿನಂತೆ ಅಂಗನವಾಡಿ ಉದ್ಯೋಗಿಗಳ ಸೇವೆ ಮತ್ತು ಗೌರವವನ್ನು ನಾಗರೀಕ ಸೇವೆಯಾಗಿ ಪರಿಗಣಿಸಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಸಿ ಮತ್ತು ಡಿ ದರ್ಜೆಯ ನೌಕರರನ್ನಾಗಿ ಖಾಯಂಗೊಳಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ನಂತರ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಫೆಡರೇಷನ್ ತಾಲ್ಲೂಕು ಘಟಕ ನೌಕರರ ಸಂಘ (ಸಿಐಟಿಯು) ಕಾರ್ಯಕರ್ತರು, ಗ್ರೇಡ್ 2 ತಹಸೀಲ್ದಾರ್ ಸುಮತಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ನೇತ್ರಾವತಿ, ಕಾರ್ಯದರ್ಶಿ ದಾನಮ್ಮ, ರಂಗಮ್ಮ, ಶೋಭಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ