LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜೀವನಶೈಲಿ ಬಹುಮುಖ್ಯ ಪಾತ್ರ ವಹಿಸುತ್ತದೆ : ಅಕ್ಷಯ ಗೋಖಲೆ

Advertisement
ತುರುವೇಕೆರೆ : ಪೋಷಕರನ್ನು ನೋಡಿ ಮಕ್ಕಳು ಬೆಳೆಯುವುದರಿಂದ ಪೋಷಕರ ನಡೆ, ನುಡಿ, ಜೀವನ ಶೈಲಿ ಮಕ್ಕಳ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಕಾರ್ಕಳದ ವಾಗ್ಮಿ, ಉಪನ್ಯಾಸಕಿ ಅಕ್ಷಯ ಗೋಖಲೆ ತಿಳಿಸಿದರು.



ಪಟ್ಟಣದ ಇಂಡಿಯನ್ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಪೋಷಕರು ಮತ್ತು ಶಿಕ್ಷಕರ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಲ್ಲಿ ಬದಲಾವಣೆಯನ್ನು ಬಯಸುವ ನಾವುಗಳು ಮೊದಲು ಬದಲಾಗಬೇಕಿದೆ. ಮಕ್ಕಳ ಬೆಳವಣಿಗೆಯ ಪ್ರತಿಯೊಂದು ಹಂತದಲ್ಲೂ ಬಹಳ ಎಚ್ಚರಿಕೆಯಿಂದ ಎಲ್ಲವನ್ನೂ ಗಮನಿಸುವ ಪೋಷಕರು ಸಂಸ್ಕೃತಿ, ಜೀವನಶೈಲಿಯ ಆಚರಣೆಯಲ್ಲೂ ಎಚ್ಚರವಹಿಸಬೇಕಿದೆ. ಮಕ್ಕಳಲ್ಲಿ ಸಂಸ್ಕಾರ, ಮೌಲ್ಯಗಳು, ಜೀವನಶೈಲಿಯಲ್ಲಿ ಶಿಸ್ತು ಎಲ್ಲವೂ ಪೋಷಕರು ನಡೆದುಕೊಳ್ಳುವ ರೀತಿಯಲ್ಲಿದೆ. ನಮ್ಮನ್ನು ನೋಡಿ ಮಕ್ಕಳು ಕಲಿಯುವುದರಿಂದ ನಾವು ಮೊದಲು ನಮ್ಮಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದರು.

ಮಕ್ಕಳು ಇದೇ ಮಾಧ್ಯಮದಲ್ಲಿ, ಇಂತಹ ಶಾಲೆಯಲ್ಲಿ ಕಲಿಯಬೇಕು, ಮುಂದೆ ಇಂತಹ ಉನ್ನತ ವ್ಯಾಸಂಗ ಮಾಡಿದರೆ ಈ ರೀತಿಯ ಉದ್ಯೋಗ ದೊರಕುತ್ತದೆ. ಅವರ ಬದುಕು ಚೆನ್ನಾಗಿರುತ್ತದೆ ಎಂದು ಆಲೋಚಿಸುವ ಪೋಷಕರು ಮನೆಯಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಬೇಕು. ಹಿರಿಯರಿಗೆ ಗೌರವ ಕೊಡುವುದು, ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳುವುದು, ಗೌರವಯುತವಾಗಿ ಮಾತನಾಡುವುದು, ಸಂಸ್ಕೃತಿ, ಸಂಪ್ರದಾಯದ ಅನುಸರಣೆ, ಶಿಸ್ತುಬದ್ದ ಜೀವನಶೈಲಿ ಇವುಗಳನ್ನು ಮಕ್ಕಳಲ್ಲಿ ಕಾಣಬೇಕಾದರೆ ಇವೆಲ್ಲವೂ ಪೋಷಕರಲ್ಲಿ ಮೊದಲಿರಬೇಕಿದೆ. ಇಲ್ಲವಾದರೆ ಮಕ್ಕಳಲ್ಲಿ ಶಿಕ್ಷಣವನ್ನು ಕಾಣಬಹುದೇ ವಿನಃ, ಸಂಸ್ಕಾರ ಹಾಗೂ ಮೌಲ್ಯಗಳನ್ನು ಕಾಣಲು ಸಾಧ್ಯವಿಲ್ಲ ಎಂದರು.

ಸಭೆಯಲ್ಲಿ ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಕಿರಿಯ ಸ್ವಾಮೀಜಿ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ, ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ರುದ್ರಯ್ಯ ಹಿರೇಮಠ, ಪ್ರಾಂಶುಪಾಲರಾದ ಪುಷ್ಪಲತಾ ಎಸ್.ಪಾಟೀಲ್, ಮುಖ್ಯಶಿಕ್ಷಕಿ ಶಶಿಕಲಾ ಹಿರೇಮಠ ಹಾಗೂ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು./

ವರದಿ: ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ