Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 10ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ 

Advertisement
ಬೆಂಗಳೂರು : ರಾಜ್ಯ ಸರ್ಕಾರವು ಮತ್ತೆ ಪಡಿತರ ಚೀಟಿ ( ಬಿಪಿಎಲ್) ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಸರ್ಕಾರದ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.

ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ ಕಲ್ಪಿಸಿದ್ದು, ಆಗಸ್ಟ್ 10ರವರೆಗೆ ಅವಕಾಶ ರೇಷನ್ ಕಾರ್ಡ್ ಅಪ್ ಡೇಟ್ ಮಾಡಲು ಏನೆಲ್ಲಾ ದಾಖಲೆಗಳು ಬೇಕು..?

ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ. ವಿದ್ಯುತ್ ಬಿಲ್ ದಾಖಲೆ ನೀಡಬೇಕು.

ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್‌ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.

ವಿಳಾಸ ಬದಲಾವಣೆ, ಕುಟುಂಬಕ್ಕೆ ಸೇರಿದವರ ಹೆಸರು ತೆಗೆಯುವುದು.ಫೋಟೋ ಮತ್ತು ಬಯೋಮೆಟ್ರಿಲ್ ಅಪ್ಡೇಟ್, ಕುಟುಂಬ ಸದಸ್ಯರ ಹೆಸರು ತಿದ್ದುಪಡಿ. ಮನೆ ಯಜಮಾನರ ಬದಲಾವಣೆ, ಹೊಸ ಸದಸ್ಯರ ಸೇರ್ಪಡೆ ಮಾಡಬಹುದು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್