Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಪಿಯುಸಿ ಅಂಕಪಟ್ಟಿ ತಿದ್ದುಪಡಿಗೆ ಅವಕಾಶ 

Advertisement
ಬೆಂಗಳೂರು: ರಾಜ್ಯದ ಕೆಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತಪ್ಪುಗಳಾಗಿರುತ್ತವೆ. ಆ ತಪ್ಪುಗಳನ್ನು ಸರಿ ಪಡಿಸೋದು ಹೇಗೆ ಎಂಬುದು ಅನೇಕ ವಿದ್ಯಾರ್ಥಿಗಳಿಗೆ ತಿಳಿದಿರೋದಿಲ್ಲ. ಅಂತವರಿಗೆ ಇಲಾಖೆಯಿಂದಲೇ ತಿದ್ದುಪಡಿಗೆ ಆದೇಶ ಮಾಡಿದೆ. ಜಸ್ಟ್ ನೀವು ಈ ಕೆಳಕಂಡ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿದರೇ ತಪ್ಪು ತಿದ್ದುಪಡಿಯಾಗಿ, ಹೊಸ ಅಂಕಪಟ್ಟಿ ಲಭ್ಯವಾಗಲಿದೆ.

ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪು ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ.


ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜ್ಞಾಪನ ಪತ್ರವನ್ನು ಹೊರಡಿಸಲಾಗಿದೆ.

ಅದರಲ್ಲಿ ಪ್ರಸ್ತುತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಪ್ರಸ್ತಾವನೆಗಳು ಪಿ.ಯು. ಅಂಕಪಟ್ಟಿ ಶಾಖೆಗೆ ಮೂಲ ಅಂಕಪಟ್ಟಿಯೊಂದಿಗೆ ಸಲ್ಲಿಸಲಾಗುತ್ತಿದ್ದು, ಸದರಿ ಅಂಕಪಟ್ಟಿಯಲ್ಲಿ ತಿದ್ದುಪಡಿಗಳಿಗೆ ಯಾವುದೇ ಶುಲ್ಕ ನಿಗದಿಯಾಗಿರುವುದಿಲ್ಲ.

ಈ ಮೇಲಿನ ತಿದ್ದುಪಡಿಗಳನ್ನು ಮಾಡುವ ಸಂದರ್ಭಗಳಲ್ಲಿ ಅಭ್ಯರ್ಥಿಯು ಸಲ್ಲಿಸಿರುವಂತಹ ಮೂಲ ಅಂಕಪಟ್ಟಿಯಲ್ಲಿಯೇ ಬೆರಳಚ್ಚು ಯಂತ್ರದ ಮೂಲಕ ತಿದ್ದುಪಡಿ ಮಾಡಿ ಶಾಖೆಯ ಹಿರಿಯ ಸಹಾಯಕ ನಿರ್ದೇಶಕರಿಂದ ದೃಢಿಕರಿಸಲಾಗುತ್ತಿದೆ.


ಆದರೆ ಕೆಲವು ಅಭ್ಯರ್ಥಿಗಳು ಮೂಲ ಅಂಕಪಟ್ಟಿಗಳಲ್ಲಿ ತಿದ್ದುಪಡಿಯಾಗಿರುವುದನ್ನು ಕೆಲವು ಸಂಸ್ಥೆ/ಇಲಾಖೆಗಳಲ್ಲಿ ಒಪ್ಪದ ಕಾರಣ ಮೂಲ ಅಂಕಪಟ್ಟಿಯನ್ನು ಹಿಂದಿರುಗಿಸಿ ದ್ವಿಪ್ರತಿಗಾಗಿ ಪ್ರಸ್ತಾವನೆಗಳನ್ನು ಮಂಡಲಿಗೆ ಸಲ್ಲಿಸಲಾಗುತ್ತಿದೆ. ಅಲ್ಲದೆ, ಭಾವಚಿತ್ರ ತಿದ್ದುಪಡಿಗಳಿಗೆ CORRECTED COPY ಎಂದು ಮುದ್ರಿಸಿ ನೀಡಲಾಗುತ್ತಿದ್ದು, ಇದೇ ಮಾದರಿಯಲ್ಲಿ ಪುಸಕ್ತ ಮತ್ತು ಹಿಂದಿನ ಎಲ್ಲಾ ವರ್ಷಗಳ ಅಂಕಪಟ್ಟಿ, ತಿದ್ದುಪಡಿಗಳಿಗೆ ಶುಲ್ಕವನ್ನು ನಿಗದಿಪಡಿಸಿ, ಅಂಕಪಟ್ಟಿಗಳನ್ನು ನೀಡುವ ಬಗ್ಗೆ ಮಂಡಲಿಯಿಂದ ಆದೇಶವನ್ನು ಹೊರಡಿಸಲು ಕ್ರಮ ಕೈಗೊಳ್ಳಲು ಕೋರಿರುವುದನ್ನು ಕೂಲಂಕುಷವಾಗಿ ಪರಿಶೀಲಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ ಹಾಗೂ ಮಾಧ್ಯಮ ತಿದ್ದುಪಡಿ ಮಾಡುವ ಸಂಬಂಧ ಈ ಕೆಳಕಂಡಂತೆ ಆದೇಶಿಸಿದ್ದಾರೆ.


 

ಪುಸಕ್ತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿ ಸಂಬಂಧ ಉಲ್ಲೇಖ-1ರ ಸರ್ಕಾರಿ ಆದೇಶದಲ್ಲಿ ನಿಗದಿಯಾಗಿರುವಂತೆ ಹಾಗೂ ಉಲ್ಲೇಖ-3 ರಲ್ಲಿ ಮಂಡಲಿಯ ಇ-ಕಛೇರಿಯ ಕಡತದಲ್ಲಿ ಅನುಮೋದಿಸಿರುವಂತೆ ನಿಗದಿತ ಶುಲ್ಕ ರೂ. 1600/- (ರೂಪಾಯಿ ಒಂದು ಸಾವಿರದ ಆರು ನೂರು ಮಾತ್ರ https://k2.karnataka.gov.in ಮೂಲಕ ಲಾಗಿನ್ ಆಗಿ ಚಲನ್ ಪ್ರತಿಯನ್ನು ಸೃಜಿಸಿ ಲೆಕ್ಕ ಶೀರ್ಷಿಕೆ 0202-01-101-1-06 ನ್ನು ನಮೂದಿಸಿ ಸಂಬಂಧಿಸಿದ ಬ್ಯಾಂಕ್‌ನಲ್ಲಿ ಹಣ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ ದೃಢೀಕೃತ ಪ್ರತಿ ಮತ್ತು ದ್ವಿತೀಯ ಪಿಯುಸಿಯ ಮೂಲ ಅಂಕಪಟ್ಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಪುಸ್ತಾವನೆ ಸಲ್ಲಿಸಿದಲ್ಲಿ ಮಂಡಲಿಯ ವತಿಯಿಂದ ಪರಿಷ್ಕೃತ ಅಂಕಪಟ್ಟಿಯನ್ನು ನೀಡಲಾಗುವುದು ಎಂದು ಈ ಮೂಲಕ ತಿಳಿಯಪಡಿಸಿದ್ದಾರೆ.


 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ