Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ರಚನಾಕಾರರನ್ನು ಸದಾ ಸ್ಮರಿಸಿ

Advertisement
ಕಲಘಟಗಿ: ಸ್ವಾತಂತ್ರ್ಯ, ಸಮಾನತೆ, ಏಕತೆ, ಭ್ರಾತೃತ್ವ, ಸಹೋದರತ್ವ ನಮ್ಮ ಸಂವಿಧಾನ ಪ್ರಮುಖ ಮೌಲ್ಯಗಳಾಗಿವೆ. ಸಂವಿಧಾನ ರಚನೆಗೆ ಮಹತ್ವದ ಕೊಡುಗೆ ನೀಡಿದ ಡಾ ಬಿ.ಆರ್‌.ಅಂಬೇಡ್ಕರ್‌ ಹಾಗೂ ಗಣ್ಯರನ್ನು ನಾವು ಸದಾ ಸ್ಮರಿಸಬೇಕು ಎಂದು ತಹಶೀಲ್ದಾರ್ ವೀರೇಶ ಮುಳುಗುಂದಮಠ ಹೇಳಿದರು.

ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸಂವಿಧಾದಿಂದ ಭಾರತ ಸದೃಢವಾಗಿ ಬೆಳೆದು ನಿಂತಿದೆ. ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಭಾವನೆಗಳು ನೆಲೆಯೂರಿವೆ ಎಂದಾದರೆ ಅದಕ್ಕೆ ಸಂವಿಧಾನವೇ ಮೂಲ ಕಾರಣವಾಗಿದೆ ಎಂದು ಹೇಳಿದರು.

ಸಾಧಕರಿಗೆ ಸನ್ಮಾನ:

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ಇಲಾಖೆಯ ನೌಕರರು, ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ದೇಶ ಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಪಪಂ ಅಧ್ಯಕ್ಷೆ ಶಿಲ್ಪಾ ಪಾಲ್ಕರ್, ಉಪಾಧ್ಯಕ್ಷ ಗಂಗಾಧರ ಗೌಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ಕೃಷಿಕ ಸಮಾಜದ ಅಧ್ಯಕ್ಷ ಮುಕುಂದಪ್ಪ ಅಂಚಟಗೇರಿ, ನೌಕರರ ಸಂಘದ ಅಧ್ಯಕ್ಷ ಜಗದೀಶ ವಿರಕ್ತಮಠ, ಉಪ ತಹಶೀಲ್ದಾರ್ ಬಸವರಾಜ ಹೊಂಕಣ್ಣವರ, ಬಸವರಾಜ ಅಂಗಡಿ, ಸಿಪಿಐ ಶ್ರೀಶೈಲ ಕೌಜಲಗಿ, ಆರ್.ಎಫ್.ಒ ಅರುಣಕುಮಾರ ಅಷ್ಟಗಿ, ಬಿಇಒ ಉಮಾದೇವಿ ಬಸಾಪುರ, ಕಾರ್ಮಿಕ ಇಲಾಖೆ ಅಧಿಕಾರಿ ಲತಾ ಟಿ.ಎಸ್., ಸಿಡಿಪಿಒ ವಿದ್ಯಾ ಬಡಿಗೇರ, ಶ್ರೀಧರ ಪಾಟೀಲ ಕುಲಕರ್ಣಿ, ಬಾಳು ಖಾನಾಪುರ, ಎಸ್.ಎ. ಚಿಕ್ಕನರ್ತಿ ಇತರರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್