Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ : ಬೊಮ್ಮಾಯಿ

Advertisement
ಹಾವೇರಿ: ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು, ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭೆ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಕರಿ, ನಾಗವಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.

ಕಾಂಗ್ರೆಸ್ ನವರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವರು ಸಂಸತ್ತಿಗೆ ಬರದಂತೆ ನೋಡಿಕೊಂಡಿದ್ದರು. ಅವರು ನಿಧನರಾದಾಗ ದೆಹಲಿಯಲ್ಲಿ ಅವರ ಅಂತ್ಯ ಸಂಸ್ಕಾರಕ್ಕೆ ಆರು ಅಡಿ ಜಾಗವನ್ನೂ ಕಾಂಗ್ರೆಸ್ ಕೊಡಲಿಲ್ಲ. ಈಗ ಅಂಬೇಡ್ಕರ ಬಗ್ಗೆ ಮಾತನಾಡುತ್ತಾರೆ. ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನವರಿಗೆ ಇಲ್ಲ ಎಂದು ಹೇಳಿದರು.

ಎಸ್ಸಿ ಎಸ್ಟಿ ಸುಮದಾಯಕ್ಕೆ ಕಾಂಗ್ರೆಸ್ ಯಾವುದೇ ಸಾಮಾಜಿಕ ನ್ಯಾಯ ನೀಡಿಲ್ಲ. ರಾಜ್ಯದಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷದಿಂದ ಬೇಡಿಕೆ ಇದ್ದರೂ ಯಾರೂ ಮಾಡಿರಲಿಲ್ಲ. ನನಗೂ ಜೇನುಗೂಡಿಗೆ ಕೈ ಹಾಕಬೇಡಿ ಎಂದು ಹೇಳಿದರು.

ನನಗೆ ಜೇನು ಕಡಿದರೂ ಆ ಸಮುದಾಯಗಳಿಗೆ ನ್ಯಾಯ ಕೊಡುತ್ತೇನೆ ಎಂದು ಎಸ್ಟಿಗೆ 3% ರಿಂದ ಶೇ 7% ಕ್ಕೆ ಹೆಚ್ಚಿಸಿದ್ದೇವೆ. ಎಸ್ಸಿ ಸಮುದಾಯಕ್ಕೆ 15% ರಿಂದ ಶೇ 17% ಕ್ಕೆ ಹೆಚ್ಚಳ ಮಾಡಿದ್ದೇನೆ. ಅದನ್ನು ಸಂವಿಧಾನದ ಸೆಡ್ಯೂಲ್ 9ರಲ್ಲಿ ಸೇರಿಸುವಂತೆ ಕೇಳುತ್ತಿದ್ದಾರೆ.

ಅದಕ್ಕೂ ಮೊದಲೇ ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಜಾರಿಯಾಗಿದ್ದು, ಇದರಿಂದ ಎಸ್ಟಿ ಸಮುದಾಯದ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮೀಸಲಾತಿ ಅಡಿ ಮೆಡಿಕಲ್ ಸೀಟು ದೊರೆತಿದೆ‌. ಸುಮಾರು ನಾಲ್ಕು ಸಾವಿರ ಇಂಜನೀಯರಿಂಗ್ ಹೆಚ್ಚಿಗೆ ಸೀಟು ದೊರೆತಿವೆ ಎಂದು ಹೇಳಿದರು
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ