LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಕೇರಳ ದೇಗುಲಗಳಿಗೆ 12 ಕೋಟಿ ರೂ. ನೆರವು ನೀಡಿದ ಅನಂತ್ ಅಂಬಾನಿ

Advertisement
ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ‌ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಂತ್‌ ಅಂಬಾನಿ ಅವರು ಕೇರಳದ ಅತ್ಯಂತ ಪ್ರಸಿದ್ಧ ದೇವಾಲಯ ಗಳಾದ ತಳಿಪರಂಬ ರಾಜರಾಜೇಶ್ವರ ದೇವಸ್ಥಾನ ಮತ್ತು ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಈ ಎರಡು ದೇವಾಲಯಗಳಿಗೆ ತಲಾ 3 ಕೋಟಿ ರೂ.ಗಳಂತೆ 6 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಮರ್ಪಿಸಿದರು.

ಇನ್ನು ರಾಜರಾಜೇಶ್ವರ ದೇಗುಲದ ನವೀಕರಣಕ್ಕಾಗಿ 12 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದರು. ಗುರುವಾಯೂರು ಶ್ರೀ ಕೃಷ್ಣನ ಸನ್ನಿಧಾನದಲ್ಲಿರುವ ಆನೆಗಳ ಕ್ಷೇಮಾ ಭಿವೃದ್ಧಿಗಾಗಿ ಹೆಚ್ಚುವರಿ ಆರ್ಥಿಕ ನೆರವನ್ನು ಅನಂತ್‌ ಅಂಬಾನಿ ಪ್ರಕಟಿಸಿದರು.

ಏಪ್ರಿಲ್‌ 2ರಂದು ರಾತ್ರಿ 8 ಗಂಟೆಗೆ ತಳಿಪರಂಬದ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನಂತ್‌ ಅಂಬಾನಿ ಅವರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ಸೇವೆಗಳಾದ ಪೊನ್ನುಂಕುಡಂ, ಪಟ್ಟಂ, ತಾಲಿ, ನೆಯ್ನಾಮೃತು ಅರ್ಪಿಸಿ ಅಶ್ವಮೇಧ ನಮಸ್ಕಾರವನ್ನು ನೆರವೇರಿಸಿದರು.

ದೇವಾಲಯದ ಪ್ರಸ್ತುತ ನಡೆಯುತ್ತಿರುವ ನವೀಕರಣ ಕಾಮಗಾರಿಗಳಿಗಾಗಿ ಮೊದಲ ಹಂತದಲ್ಲಿ 3 ಕೋಟಿ ರೂಪಾಯಿಗಳ ಚೆಕ್‌ ಅನ್ನು ಹಸ್ತಾಂತರಿಸಿದರು. ರಾಜರಾಜೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಅಂಬಾನಿ ಅವರು ಒಟ್ಟು 12 ಕೋಟಿ ರೂಪಾಯಿಗಳ ಕೊಡುಗೆ ನೀಡುವುದಾಗಿ ತಿಳಿಸಿದ್ದಾರೆ.

ಈ ದೇಣಿಗೆಯಿಂದ ದೇವಸ್ಥಾನದ ಪುರಾತನ ಪೂರ್ವ ಗೋಪುರವನ್ನು ಪುನರ್‌ ನಿರ್ಮಿಸಲಾಗುವುದು. ಸುಮಾರು ಎರಡು ಶತಮಾನಗಳಿಂದ ಶಿಥಿಲಾವಸ್ಥೆ ಯಲ್ಲಿದ್ದ ಈ ಗೋಪುರವು ದೇವಸ್ಥಾನದಷ್ಟೇ ಪುರಾತನವಾದ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಹೊಂದಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ