Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇರಳ ದೇಗುಲಗಳಿಗೆ 12 ಕೋಟಿ ರೂ. ನೆರವು ನೀಡಿದ ಅನಂತ್ ಅಂಬಾನಿ

Advertisement
ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ‌ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಂತ್‌ ಅಂಬಾನಿ ಅವರು ಕೇರಳದ ಅತ್ಯಂತ ಪ್ರಸಿದ್ಧ ದೇವಾಲಯ ಗಳಾದ ತಳಿಪರಂಬ ರಾಜರಾಜೇಶ್ವರ ದೇವಸ್ಥಾನ ಮತ್ತು ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಈ ಎರಡು ದೇವಾಲಯಗಳಿಗೆ ತಲಾ 3 ಕೋಟಿ ರೂ.ಗಳಂತೆ 6 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಮರ್ಪಿಸಿದರು.

ಇನ್ನು ರಾಜರಾಜೇಶ್ವರ ದೇಗುಲದ ನವೀಕರಣಕ್ಕಾಗಿ 12 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದರು. ಗುರುವಾಯೂರು ಶ್ರೀ ಕೃಷ್ಣನ ಸನ್ನಿಧಾನದಲ್ಲಿರುವ ಆನೆಗಳ ಕ್ಷೇಮಾ ಭಿವೃದ್ಧಿಗಾಗಿ ಹೆಚ್ಚುವರಿ ಆರ್ಥಿಕ ನೆರವನ್ನು ಅನಂತ್‌ ಅಂಬಾನಿ ಪ್ರಕಟಿಸಿದರು.

ಏಪ್ರಿಲ್‌ 2ರಂದು ರಾತ್ರಿ 8 ಗಂಟೆಗೆ ತಳಿಪರಂಬದ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನಂತ್‌ ಅಂಬಾನಿ ಅವರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ಸೇವೆಗಳಾದ ಪೊನ್ನುಂಕುಡಂ, ಪಟ್ಟಂ, ತಾಲಿ, ನೆಯ್ನಾಮೃತು ಅರ್ಪಿಸಿ ಅಶ್ವಮೇಧ ನಮಸ್ಕಾರವನ್ನು ನೆರವೇರಿಸಿದರು.

ದೇವಾಲಯದ ಪ್ರಸ್ತುತ ನಡೆಯುತ್ತಿರುವ ನವೀಕರಣ ಕಾಮಗಾರಿಗಳಿಗಾಗಿ ಮೊದಲ ಹಂತದಲ್ಲಿ 3 ಕೋಟಿ ರೂಪಾಯಿಗಳ ಚೆಕ್‌ ಅನ್ನು ಹಸ್ತಾಂತರಿಸಿದರು. ರಾಜರಾಜೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಅಂಬಾನಿ ಅವರು ಒಟ್ಟು 12 ಕೋಟಿ ರೂಪಾಯಿಗಳ ಕೊಡುಗೆ ನೀಡುವುದಾಗಿ ತಿಳಿಸಿದ್ದಾರೆ.

ಈ ದೇಣಿಗೆಯಿಂದ ದೇವಸ್ಥಾನದ ಪುರಾತನ ಪೂರ್ವ ಗೋಪುರವನ್ನು ಪುನರ್‌ ನಿರ್ಮಿಸಲಾಗುವುದು. ಸುಮಾರು ಎರಡು ಶತಮಾನಗಳಿಂದ ಶಿಥಿಲಾವಸ್ಥೆ ಯಲ್ಲಿದ್ದ ಈ ಗೋಪುರವು ದೇವಸ್ಥಾನದಷ್ಟೇ ಪುರಾತನವಾದ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಹೊಂದಿದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ