LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಕೇರಳ ದೇಗುಲಗಳಿಗೆ 12 ಕೋಟಿ ರೂ. ನೆರವು ನೀಡಿದ ಅನಂತ್ ಅಂಬಾನಿ

Advertisement
ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ‌ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಂತ್‌ ಅಂಬಾನಿ ಅವರು ಕೇರಳದ ಅತ್ಯಂತ ಪ್ರಸಿದ್ಧ ದೇವಾಲಯ ಗಳಾದ ತಳಿಪರಂಬ ರಾಜರಾಜೇಶ್ವರ ದೇವಸ್ಥಾನ ಮತ್ತು ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಈ ಎರಡು ದೇವಾಲಯಗಳಿಗೆ ತಲಾ 3 ಕೋಟಿ ರೂ.ಗಳಂತೆ 6 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಮರ್ಪಿಸಿದರು.

ಇನ್ನು ರಾಜರಾಜೇಶ್ವರ ದೇಗುಲದ ನವೀಕರಣಕ್ಕಾಗಿ 12 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದರು. ಗುರುವಾಯೂರು ಶ್ರೀ ಕೃಷ್ಣನ ಸನ್ನಿಧಾನದಲ್ಲಿರುವ ಆನೆಗಳ ಕ್ಷೇಮಾ ಭಿವೃದ್ಧಿಗಾಗಿ ಹೆಚ್ಚುವರಿ ಆರ್ಥಿಕ ನೆರವನ್ನು ಅನಂತ್‌ ಅಂಬಾನಿ ಪ್ರಕಟಿಸಿದರು.

ಏಪ್ರಿಲ್‌ 2ರಂದು ರಾತ್ರಿ 8 ಗಂಟೆಗೆ ತಳಿಪರಂಬದ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನಂತ್‌ ಅಂಬಾನಿ ಅವರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ಸೇವೆಗಳಾದ ಪೊನ್ನುಂಕುಡಂ, ಪಟ್ಟಂ, ತಾಲಿ, ನೆಯ್ನಾಮೃತು ಅರ್ಪಿಸಿ ಅಶ್ವಮೇಧ ನಮಸ್ಕಾರವನ್ನು ನೆರವೇರಿಸಿದರು.

ದೇವಾಲಯದ ಪ್ರಸ್ತುತ ನಡೆಯುತ್ತಿರುವ ನವೀಕರಣ ಕಾಮಗಾರಿಗಳಿಗಾಗಿ ಮೊದಲ ಹಂತದಲ್ಲಿ 3 ಕೋಟಿ ರೂಪಾಯಿಗಳ ಚೆಕ್‌ ಅನ್ನು ಹಸ್ತಾಂತರಿಸಿದರು. ರಾಜರಾಜೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಅಂಬಾನಿ ಅವರು ಒಟ್ಟು 12 ಕೋಟಿ ರೂಪಾಯಿಗಳ ಕೊಡುಗೆ ನೀಡುವುದಾಗಿ ತಿಳಿಸಿದ್ದಾರೆ.

ಈ ದೇಣಿಗೆಯಿಂದ ದೇವಸ್ಥಾನದ ಪುರಾತನ ಪೂರ್ವ ಗೋಪುರವನ್ನು ಪುನರ್‌ ನಿರ್ಮಿಸಲಾಗುವುದು. ಸುಮಾರು ಎರಡು ಶತಮಾನಗಳಿಂದ ಶಿಥಿಲಾವಸ್ಥೆ ಯಲ್ಲಿದ್ದ ಈ ಗೋಪುರವು ದೇವಸ್ಥಾನದಷ್ಟೇ ಪುರಾತನವಾದ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಹೊಂದಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್