Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಂಧ್ರಪ್ರದೇಶದ ಸಿಎಂ ಮೇಲೆ ಕಲ್ಲು ತೂರಾಟ : ಹಣೆಗೆ ಗಾಯ

Advertisement
ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ವಿಜಯವಾಡದಲ್ಲಿ ಶನಿವಾರ ರೋಡ್‌ ಶೋ ನಡೆಸುವ ವೇಳೆ ಅಪರಿಚಿತರಿಂದ ಕಲ್ಲು ತೂರಾಟ ನಡೆಸಿದ್ದರಿಂದ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಅವರ ಎಡಭಾಗದಲ್ಲಿ ಕಣ್ಣಿನ ಮೇಲೆ ಸಣ್ಣ ಗಾಯವಾಗಿದೆ ಎಂದು ತಿಳಿದುಬಂದಿದೆ.

ವಿಜಯವಾಡದ ಸಿಂಗ್ ನಗರದಲ್ಲಿರುವ ವಿವೇಕಾನಂದ ಸ್ಕೂಲ್ ಸೆಂಟರ್‌ನಲ್ಲಿ ಬಸ್ ಯಾತ್ರೆ ಭಾಗವಾಗಿ ರೋಡ್ ಶೋ ನಡೆಸುವಾಗ ಸಿಎಂ ಮೇಲೆ ಕಲ್ಲು ತೂರಿ ಬಂದಿದೆ ಎಂದು ಮುಖ್ಯಮಂತ್ರಿ ಕಚೇರಿ(ಸಿಎಂಒ) ಹೇಳಿಕೆ ತಿಳಿಸಿದೆ.

ವೈಎಸ್‌ಆರ್‌ಸಿಪಿ ಮುಖ್ಯಸ್ಥರು ತಮ್ಮ 'ಮೇಮಂತ ಸಿದ್ಧಂ'(ನಾವೆಲ್ಲರೂ ಸಿದ್ಧರಿದ್ದೇವೆ) ಚುನಾವಣಾ ಪ್ರಚಾರ ಪ್ರವಾಸದ ವೇಳೆ ಬಸ್‌ನ ಮೇಲೆ ನಿಂತಿರುವುದನ್ನು ವೀಡಿಯೊ ತೋರಿಸುತ್ತದೆ. ಅವರಿಗೆ ಕಲ್ಲು ಹೊಡೆದ ನಂತರ, ಪಕ್ಕದಲ್ಲಿರುವ ಜನ ಆರಂಭದಲ್ಲಿ ಕರವಸ್ತ್ರದಿಂದ ಅವನ ಹಣೆಯನ್ನು ಒರೆಸುವುದನ್ನು ಕಾಣಬಹುದು. ಕೂಡಲೇ ವೈದ್ಯರು ಬಸ್‌ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ನಂತರ ಜಗನ್ ನಗರದಲ್ಲಿ ತಮ್ಮ ಪ್ರವಾಸವನ್ನು ಪುನರಾರಂಭಿಸಿದರು.

ಕವಣೆಯಂತ್ರದಿಂದ ಕಲ್ಲು ಬೀಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಈ “ದಾಳಿಯ” ಹಿಂದೆ ತೆಲುಗು ದೇಶಂ ಪಕ್ಷ(ಟಿಡಿಪಿ) ಕೈವಾಡವಿದೆ ಎಂದು ವೈಎಸ್‌ಆರ್‌ಸಿಪಿ ನಾಯಕರು ಆರೋಪಿಸಿದ್ದಾರೆ.

ರೆಡ್ಡಿ ಅವರು ಕಡಪ ಜಿಲ್ಲೆಯ ಇಡುಪುಲುಪಾಯದಿಂದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರದವರೆಗೆ 21 ದಿನಗಳ ಚುನಾವಣಾ ಪ್ರಚಾರ ಬಸ್ ಪ್ರವಾಸ ಕೈಗೊಂಡಿದ್ದಾರೆ.

ಆಂಧ್ರಪ್ರದೇಶದ 175 ಸದಸ್ಯ ಬಲದ ವಿಧಾನಸಭೆ ಮತ್ತು 25 ಲೋಕಸಭೆ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ