Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನಿವೃತ್ತಿ ಭತ್ಯೆ ನೀಡಲು ಒತ್ತಾಯ

Advertisement
ಸಿರುಗುಪ್ಪ: 2011 ರಿಂದ 2023 ಮಾರ್ಚ್ವರೆಗೆ ನಿವೃತ್ತಿಯಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ 1972 ರ ಗೌರವಧನ ಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲೂಕು ಸಮಿತಿ ವತಿಯಿಂದ ಸಿ.ಡಿ.ಪಿ.ಓ ಪ್ರದೀಪ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ತಾಲೂಕು ಸಮಿತಿ ಖಜಾಂಚಿ ಮೇಲ್ಗಡೆ ಖಾಜಾಬೀ ಅವರು ಮಾತನಾಡಿ 1975 ರಲ್ಲಿ ಶಿಶುವಿನಂತಿದ್ದ ಶಿಶು ಅಭಿವೃದ್ದಿ ಯೋಜನೆ ಇಂದು ಹೆಮ್ಮರವಾಗಿ ಬೆಳೆದು ರಾಜ್ಯದಲ್ಲಿಂದು ಸುಮಾರು 50 ಲಕ್ಷ ಫಲಾನುಭವಿಗಳಿದ್ದಾರೆ. ಮಾತ್ರವಲ್ಲದೇ ಮಾನವ ಸಂಪನ್ಮೂಲಗಳ ಬೆಳವಣಿಗೆಗಳನ್ನು ಖಾತ್ರಿ ಪಡಿಸುವ ಯೋಜನೆಯಾಗಿ ಬೆಳಿದಿದೆ.

ಇಂತಹ ಯೋಜನೆಗೆ 75, 150 ರೂಪಾಯಿಯಂತೆ ಸಾವಿರಾರು ಜನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ದುಡಿದಿದ್ದಾರೆ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಇಲ್ಲಿಯವರೆಗೆ ಅಂದರೆ 2011 ರಿಂದ 2023 ಮಾರ್ಚ್ರವರೆಗೆ ಕಾರ್ಯ ನಿರ್ವಹಿಸಿ ನಿವೃತ್ತಿಯಾದ ಎಲ್ಲಾ ನಮ್ಮ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ನಿವೃತ್ತಿ ಭತ್ಯೆಯನ್ನು ನೀಡಬೇಕೆಂದು ಒತ್ತಾಯಿಸಿದರು.
ಇದೇ ವೇಳೆ ಕಾರ್ಯದರ್ಶಿ ಎಸ್.ಹೆಚ್.ಶಕುಂತಲಾ ಇನ್ನಿತರ ಪದಾಧಿಕಾರಿಗಳಾದ ರಾಜಲಕ್ಷ್ಮಿ, ರಾಜೇಶ್ವರಿ, ಕೆ.ದುರ್ಗಾಭವಾನಿ ಸೇರಿದಂತೆ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ