Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಯಲು ಬಾ ಎಂದು ಕರೆಯುತ್ತಿದ್ದ ಅಣ್ಣನೇ ಹತ್ಯೆಗೈದ ತಮ್ಮ 

Advertisement
ಬೆಳಗಾವಿ: ಕೆಲಸಕ್ಕೆ ಹೋಗಲು ಬಿಡದೇ ಕುರಿ ಕಾಯಲು ಬಾ ಎಂದು ಕರೆಯುತ್ತಿದ್ದ ಅಣ್ಣನ ಕಾಟಕ್ಕೆ ಬೇಸತ್ತು ತಮ್ಮನೇ ಅಣ್ಣನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಟ್ಟಿ ಆಲೂರಿನಲ್ಲಿ ನಡೆದಿದೆ.

ರಾಯಪ್ಪ ಸುರೇಶ್ ಕಮತಿ (28) ಕೊಲೆಯಾದ ವ್ಯಕ್ತಿ. ಬಸವರಾಜ್ ಕಮತಿ (24) ಅಣ್ಣನನ್ನೇ ಕೊಂದ ತಮ್ಮ. ಬಸವರಾಜ್ ಕಮತಿ ಕುವೈತ್ ನ್ಯಾಷನಲ್ ಪೆಟ್ರೋಲಿಯಂ ಕಂಪನಿಯಲ್ಲಿ ವಾಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ರಜೆ ಮೇಲೆ ತನ್ನ ಊರಾದ ಹಟ್ಟಿ ಆಲೂರಿಗೆ ತೆರಳಿದ್ದ. ಈ ವೇಳೆ ಅಣ್ಣ ರಾಯಪ್ಪ ಕಮತಿ, ಬಸವರಾಜ್ ಗೆ ಮತ್ತೆ ಕೆಲಸಕ್ಕೆ ಹೋಗಲು ಬಿಡದೇ ತನ್ನೊಂದಿಗೆ ಕುರಿ ಕಾಯಲು ಬಾ ಎಂದು ಕರೆಯುತ್ತಿದ್ದನಂತೆ. ಅಲ್ಲದೇ ಪ್ರತಿದಿನ ಕುರಿದೊಡ್ಡಿಯಲ್ಲಿ ಮಲಗಲು ಹೇಳುತ್ತಿದ್ದನಂತೆ. ಇದೇ ಕಾರಣಕ್ಕೆ ಸಹೋದರರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಬೇಸತ್ತ ಬಸವರಾಜ್ ಅಣ್ಣನನ್ನೇ ಕೊಲ್ಲಲು ಪ್ಲಾನ್ ಮಾಡಿದ್ದಾನೆ.

ಅಣ್ಣ ಕುರಿ ಕಾಯಲು ಜಮೀನು ಬಳಿ ಹೋಗಿದ್ದಾಗ ಬಸವರಾಜ್ ಮನೆಯಿಂದ ಖಾರದ ಪುಡಿ ತೆಗೆದುಕೊಂಡು ಹೋಗಿದ್ದಾನೆ. ಅಣ್ಣ ಮರದ ಕೆಳಗೆ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತ ಕುಳಿತಿದ್ದನ್ನು ಕಂಡು ರಾಯಪ್ಪನ ಮುಖಕ್ಕೆ ಖಾರದ ಪುಡಿ ಎರಚಿ, ತಲೆಯ ಮೇಲೆ, ಮುಖದ ಮೇಲೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ. ಬಳಿಕ ತನಗೇನೂ ಗೊತ್ತಿಲ್ಲ ಎಂಬಂತೆ ಮನೆಗೆ ಬಂದಿದ್ದಾನೆ.

ಒಂದು ದಿನ ಕಳೆದರೂ ರಾಯಪ್ಪ ಮನೆಗೆ ಹಿಂದಿರುಗದಿದ್ದಾಗ ಆತಂಕಗೊಂಡ ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸದ್ಯ ಆರೋಪಿ ಬಸವರಾಜ್ ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಸವರಾಜ್ ಅಣ್ಣನನ್ನು ತಾನೇ ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ