LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಿಲ್ಲರ್ BMTCಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು 

Advertisement

ಬೆಂಗಳೂರು: ಬಿಎಂಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆಯ ಸಿರಾ ಮೂಲದ ಮನು ಎಂದು ಗುರುತಿಸಲಾಗಿದೆ.ಬೆಂಗಳೂರಿನ ನೆಲಮಂಗಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನು ತಮ್ಮ ಪತ್ನಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಮಾಹಿತಿ ಪ್ರಕಾರ, ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ಮನು ಅವರ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪತ್ನಿಯ ಕಣ್ಣೆದುರೇ ಪತಿ ಮೃತಪಟ್ಟಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಮನು ಅವರು ನೆಲಮಂಗಲದ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಮನು ಅವರು ಸುಮಾರು 8 ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದರು. 

ಮದುವೆಯಾಗಿ ಕೆಲವೇ ತಿಂಗಳಲ್ಲಿ ದುರಂತ ಸಂಭವಿಸಿರುವುದು ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದೇ ದಿನ 240ಕ್ಕೂ ಹೆಚ್ಚು ಅರ್ಜಿಗಳನ್ನ ವಿಲೇವಾರಿ ಮಾಡಿದ ನ್ಯಾ. ನಾಗಪ್ರಸನ್ನ ಸೆಪ್ಟೆಂಬರ್ 21ರಿಂದ ಮೂರು ದಿನ ವಿಶೇಷ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ 'ಬಳ್ಳಾರಿ ಚಲೋ' ಪಾದಯಾತ್ರೆಇಂಗ್ಲೆAಡ್ ತಂಡಕ್ಕೆ ಮರಳಿದ ಸೋನಿ ಬೇಕರ್ಮಹಿಳೆಯರ ಚಾಂಪಿಯನ್ಸ ಟ್ರೋಫಿಗೆ ಭಾರತ ಆತೀಥ್ಯಡಾ.ಸಂದೇಶಗೌಡರ ವೈದ್ಯಕೀಯ ಸೇವೆ ಗ್ರಾಮೀಣ ಜನರಿಗೆ ವರದಾನವಾಗಲಿ :  ಹೆಚ್.ಶರ್ಫುದ್ದೀನ್ ಪೋತ್ನಾಳ. ಸೆ.8 ರಂದು ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಸ್ವಚ್ಚವಾಹಿನಿಯರ ಬೇಡಿಕೆಗಳ ಈಡೇರಿಕೆಗೆ  ಬೆಂಗಳೂರು ಚಲೋ : ಹೆಚ್.ಶರ್ಫುದ್ದೀನ್ ಪೋತ್ನಾಳ. ಕಿಲ್ಲರ್ BMTCಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು ರಾಹುಲ್ ಗಾಂಧಿ ಮೇಲಿನ FIR ಸಂವಿಧಾನ ವಿರೋಧಿ ಕೃತ್ಯ: ಸಿದ್ದರಾಮಯ್ಯ ವಾಗ್ಧಾಳಿ ದುಲಿಪ್ ಟ್ರೋಫಿ : ದಕ್ಷಿಣ ವಲಯ ಪೈನಲ್ ಗೆ