Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಡಾನೆ ದಾಳಿಗೆ ಮತ್ತೊಬ್ಬ ಮಹಿಳೆ  ಬಲಿ

Advertisement
ಹಾಸನಕಾಡಾನೆ ದಾಳಿಗೆ ಬೇಲೂರು ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆ ಬಲಿಯಾಗಿದ್ದು, ಕಳೆದ 2 ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 4ನೇ ಘಟನೆ ಇದಾಗಿದೆ. ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.

ಸುಶೀಲಮ್ಮ (63) ಮೃತ ಮಹಿಳೆ. 2 ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ನಾಲ್ಕನೇ ಬಲಿ ಆಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ಕಾಲಿನಿಂದ ತಲೆಯನ್ನು ತುಳಿದು ಸಾಯಿಸಿದೆ. ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ಚೀಕನಹಳ್ಳಿ-ಬೇಲೂರು ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸುವಂತೆ ಆಗ್ರಹಿಸಿದರಲ್ಲದೇ, ಅರಣ್ಯ ಸಚಿವರು ಬರುವವರೆಗೂ ಶವ ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಪ್ರತಿಭಟನೆ ವೇಳೆ ಸಾರಿಗೆ ಬಸ್ ಚಾಲನೆಗೆ ಮುಂದಾದ ಚಾಲಕನ ವಿರುದ್ಧ ಹರಿಹಾಯ್ದ ಪ್ರತಿಭಟನಾಕಾರರು ಬಸ್ ಮುಂದೆ ಹೋಗದಂತೆ ತಡೆದು ಟೈರ್​ಗೆ ಬೆಂಕಿ ಹಚ್ಚಿ ರಸ್ತೆಯಲ್ಲಿ ಧರಣಿ ಕುಳಿತು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ರಸ್ತೆಯಲ್ಲೇ ಕುಳಿತು ನೂರಾರು ಮಂದಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ರಾತ್ರಿ 10ಗಂಟೆಯಾದರೂ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ