Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಸಮಾರಂಭ

Advertisement


ಸಿರುಗುಪ್ಪ : ನಗರದ ಸಿ.ಡಿ.ಪಿ.ಓ ಕಛೇರಿಯ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಡೆದ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಸಮಾರಂಭವನ್ನು ತಹಶೀಲ್ದಾರ್ ಗೌಸಿಯಾ ಬೇಗಂ ಅವರು ಉದ್ಘಾಟಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಅವರು ಸರ್ಕಾರವು ಸಮಾಜದ ಕಟ್ಟಕಡೆಯಲ್ಲಿರುವ ಎಲ್ಲಾ ಜಾತಿಗಳಿಗೂ ಸಮಾನತೆ ದೊರಕಿಸುವ ನಿಟ್ಟಿನಲ್ಲಿ ಆಯಾ ಜನಾಂಗದ ಸುಮಾರು 46 ಜನ ದಾರ್ಶನಿಕರನ್ನು ಗುರುತುಪಡಿಸಿ ಜಯಂತ್ಯೋತ್ಸವವನ್ನು ಆಚರಿಸುತ್ತಿದೆ.
ಅದರಂತೆ ನಾವೆಲ್ಲರೂ ಎಲ್ಲಾ ತತ್ವಜ್ಞಾನಿಗಳು, ಶರಣರು, ದಾರ್ಶನಿಕರು, ಸಮಾಜದ ಹಿತ ಚಿಂತಕರನ್ನು ನಾವೆಲ್ಲಾ ಸ್ಮರಿಸಬೇಕೆಂದು ಪ್ರಾಸ್ತಾವಿಕವಾಗಿ ಮಾತನಾಡಿದರು

ಸಮಾರಂಭದಲ್ಲಿ ಹಡಪದ ಸಮಾಜದ ಗೌರವಾಧ್ಯಕ್ಷ ಹೆಚ್.ಕೆ.ನಾಗರಾಜ ಅಧ್ಯಕ್ಷ ವೀರೇಶ ಅವರು ಮಾತನಾಡಿ ನಮ್ಮ ಜನಾಂಗ ಆರ್ಥಿಕವಾಗಿ ಹಿಂದುಳಿದಿದ್ದು, ಶುಭ ಸಮಾರಂಭಗಳಿಗೆ ತಾಲೂಕು ಕೇಂದ್ರದಲ್ಲಿ ಒಂದು ಭವನವನ್ನು ನಿರ್ಮಿಸಿಕೊಡಬೇಕೆಂದು ತಹಶೀಲ್ದಾರರಲ್ಲಿ ಮನವಿ ಮಾಡಿದರು.
ಅಲ್ಲದೇ ಕಾರ್ಯಕ್ರಮದಲ್ಲಿ ಕೆಲವೇ ಕೆಲವು ಇಲಾಖೆಗಳ ಅಧಿಕಾರಿಗಳು ಹಾಜರಾಗಿದ್ದನ್ನು ಗಮನಿಸಿ ಜಯಂತಿ ಆಚರಣೆಯಲ್ಲಿ ಅಸಡ್ಡೆ ತೋರುತ್ತಿರುವ ಬಗ್ಗೆಯು ಬೇಸರ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಈಗಾಗದಂತೆ ಗಮನವಹಿಸಬೇಕು ಎಂದು ತಿಳಿಸಿದರು.
ಬಸವೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಜಡೆಪ್ಪ ಅವರು ತಮ್ಮ ವಿಶೇಷ ಉಪನ್ಯಾಸದಲ್ಲಿ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಜೀವನ ಚರಿತ್ರೆ, ಅವರ ವಚನ ಸಾಹಿತ್ಯದ ತಿರುಳನ್ನು ಕಾರ್ಯಕ್ರಮದಲ್ಲಿ ನೆರೆದಿದ್ದ ಮುಖಂಡರಿಗೆ ತಿಳಿಸಿದರು.
ಇದೇ ವೇಳೆ ಉಪ ತಹಶೀಲ್ದಾರ್ ಸಿದ್ದಾರ್ಥ್ ಕಾರಂಜಿ, ಹಡಪದ ಸಮಾಜದ ಉಪಾಧ್ಯಕ್ಷ ಬಸವರಾಜ್ ಸೇರಿದಂತೆ ಹಡಪದ ಸಮಾಜದವರು ಹಾಗೂ ಇನ್ನಿತರ ಇಲಾಖೆಗಳ ಸಿಬ್ಬಂದಿಗಳು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ