ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಕಂದಾಯ ಇಲಾಖೆಯು (Revenue Department) ಇಂದಿನಿಂದಲೇ (ಜುಲೈ 16) ಅನ್ವಯವಾಗುವಂತೆ ಅತ್ಯಂತ ಮಹತ್ವದ ಕೊಡುಗೆಯೊಂದನ್ನು ನೀಡಿದೆ.
ಇನ್ಮುಂದೆ ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಬಯಸುವ ನಾಗರಿಕರು ಇಂದಿನಿಂದಲೇ ಅಧಿಕೃತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರು ಈ ಯೋಜನೆಗೆ ಚಾಲನೆ ದೊರೆತಿರುವುದನ್ನು ದೃಢೀಕರಿಸಿದ್ದು, ಸಾರ್ವಜನಿಕರು ಇದರ ಲಾಭ ಪಡೆಯಲು ಕೋರಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
ನಾಗರಿಕರ ಅನುಕೂಲಕ್ಕಾಗಿ ಇಲಾಖೆಯು ಆನ್ಲೈನ್ ಮತ್ತು ಆಫ್ಲೈನ್ ಎರಡೂ ಮಾಧ್ಯಮಗಳ ಮೂಲಕ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ನೀಡಿದೆ.
ಮೊಬೈಲ್ ಆಪ್: ಇದಕ್ಕಾಗಿ ಸರ್ಕಾರ ಹೊಸದಾಗಿ ವಿಶೇಷ ಮೊಬೈಲ್ ಆಪ್ ಒಂದನ್ನು ಸಿದ್ಧಪಡಿಸಿದೆ.
ಸೇವಾ ಸಿಂಧು ಪೋರ್ಟಲ್: ಸರ್ಕಾರದ ಅಧಿಕೃತ 'ಸೇವಾ ಸಿಂಧು' (Seva Sindhu) ವೆಬ್ಸೈಟ್ಗೆ ಲಾಗಿನ್ ಆಗುವ ಮೂಲಕ ಸಾರ್ವಜನಿಕರು ಮನೆಯಲ್ಲೇ ಕುಳಿತು ಸುಲಭವಾಗಿ ಅಪ್ಲೈ ಮಾಡಬಹುದು.


