Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಸಿಂಚಾಯಿ, ಎನ್.ಆರ್.ಇ.ಜಿ. ಪ್ರೋತ್ಸಾಹ ಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

Advertisement
ತುರುವೇಕೆರೆ: -2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಅಡಿಕೆ ಬೆಳೆ ಹೊರತುಪಡಿಸಿ ಇತರೆ ತೋಟಗಾರಿಕಾ ಬೆಳೆಗಳಿಗೆ ಅಳವಡಿಸಲು ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಆಂಜನೇಯ ರೆಡ್ಡಿ ತಿಳಿಸಿದರು.

ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಸ್ಥಾಪಿಸುವುದರಿಂದ ರೈತರಿಗೆ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ಅವರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗಿರುತ್ತದೆ. ಈ ಯೋಜನೆಯಡಿ ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಹನಿ ನೀರಾವರಿ ಅಳವಡಿಕೆಗೆ ಬಹುವಾರ್ಷಿಕ ಬೆಳೆಗಳಿಗೆ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ.

ಭಾರತ ಸರ್ಕಾರದ ಮಾರ್ಗಸೂಚಿ ಅನ್ವಯ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಎಲ್ಲಾ ವರ್ಗದ ರೈತರಿಗೆ ಶೇ. 90 ಹಾಗೂ ನಂತರ 3 ಹೆಕ್ಟೇರ್ ವರೆಗೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು. ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳುವುದ ಕಡ್ಡಾಯವಾಗಿದೆ ಎಂದರು.

2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಎನ್.ಆರ್.ಇ.ಜಿ. ಯೋಜನೆಯಲ್ಲಿ ಪ್ರೋತ್ಸಾಹ ಧನ ನೀಡುತ್ತಿದ್ದು, ತಾಲ್ಲೂಕಿನ ರೈತರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಪ್ರೋತ್ಸಾಹ ಧನ ಪಡೆಯಬಹುದಾಗಿದೆ. ಈ ಯೋಜನೆಯಲ್ಲಿ ಅಡಿಕೆಯನ್ನು ಹೊರತುಪಡಿಸಿ ತೆಂಗು, ಸೀಬೆ, ದಾಳಿಂಬೆ, ಮಾವು, ಸಪೋಟ, ಹುಣಸೆ, ನಿಂಬೆ, ಡ್ರಾಗನ್ ಫ್ರೂಟ್, ಗುಲಾಬಿ, ಹಲಸು, ಕೋಕೋ, ಬಾಳೆ, ಪಪ್ಪಾಯಿ ಬೆಳೆಗಳನ್ನು ಮುಖ್ಯ ಬೆಳೆಗಳಾಗಿ ಬೆಳೆಯಬಹುದಾಗಿದೆ ಎಂದರು.

ಈ ಯೋಜನೆಗಳಡಿ ಸೌಲಭ್ಯ ಪಡೆಯಲು ಇಚ್ಛಿಸುವ ರೈತರು, ಫಲಾನುಭವಿಗಳು ಸೂಕ್ತ ದಾಖಲೆಗಳೊಂದಿಗೆ ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ ಮತ್ತು ದಂಡಿನಶಿವರ: 9480158831, ಮಾಯಸಂದ್ರ: 9964941890 ಮತ್ತು ದಬ್ಬೇಘಟ್ಟ 9110206683 ಗೆ ಸಂಪರ್ಕಿಸಲು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಆಂಜನೇಯ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: -ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ