Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ಸಂಘ ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

Advertisement
ಅರಸೀಕೆರೆ : ನಗರದ ಪ್ರವಾಸಿ ಮಂದಿರದಲ್ಲಿ ಇಂದು ಅಖಿಲ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ ಮತ್ತು ರೈತರ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಭಾಗದ ರೈತರು ಹಾಸನ ಜಿಲ್ಲಾ ಅಧ್ಯಕ್ಷರಾದ ಕೋಡಿಹಳ್ಳಿ ಕುಮಾರ್ ಅವರ ಸಮ್ಮುಖದಲ್ಲಿ ರೈತರು ಸೇರ್ಪಡೆಗೊಂಡರು. ಸೇರ್ಪಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕುಮಾರ್ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು ನಿರ್ಮೂಲನೆ ಮಾಡಲು ಸಂಘಟನೆಗಳ ಶಕ್ತಿ ಅತಿ ಮುಖ್ಯವಾದದ್ದು. ಪ್ರತಿಯೊಂದು ಕಚೇರಿಗಳಾಗಲಿ ಇತರೆ ಭಾಗಗಳಾಗಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಅದನ್ನು ನಿರ್ಮೂಲನೆ ಮಾಡಬೇಕಾದರೆ ಸಂಘಟನೆಗಳ ಮೂಲಕ ಮಾತ್ರ ಸಾಧ್ಯವಾಗಲಿದೆ.ಒಬ್ಬ ವ್ಯಕ್ತಿಯಿಂದ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಾಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ರೈತನ ಕಷ್ಟಗಳಿಗೆ ಮತ್ತು ರೈತನ ಸಮಸ್ಯೆಗಳನ್ನು ನಿರ್ಮೂಲನೆ ಮಾಡಬೇಕಾದರೆ ಒಂದು ಸಂಘಟನೆಯಿಂದ ಮಾತ್ರ ಸಾಧ್ಯವಾಗಲಿದೆ ಎಂದು ಕುಮಾರ್ ಅವರು ಹೇಳಿದರು. ನಂತರ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ ರೈತರು ಕಷ್ಟ ಪಟ್ಟ ಬೆಳೆದ ಬೆಳೆಗಳಿಗೂ ಇತ್ತೀಚಿನ ದಿನಗಳಲ್ಲಿ ಬೆಂಬಲ ಬೆಲೆ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ . ಆದ್ದರಿಂದ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಉದ್ದೇಶದಿಂದ ಹಲವು ಭಾಗದ ಯುವ ರೈತರು ಈ ದಿನ ಸಂಘಟನೆಗೆ ಶಕ್ತಿ ತುಂಬ ಉದ್ದೇಶದಿಂದ ಮತ್ತು ನಮ್ಮ ರೈತರ ಸಮಸ್ಯೆಯನ್ನು ನಿರ್ಮೂಲನೆ ಮಾಡುವ ಮೂಲಕ ಸಂಘಟನೆ ಸೇರಿ ಭ್ರಷ್ಟಾಚಾರ ತಡೆಯಬೇಕೆಂಬ ಸಂಕಲ್ಪವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಹಾರನಹಳ್ಳಿ. ಸುಳೆಕೆರೆ. ಯಾದಪುರ.ಬೆಳಗುಂಬ. ಟೀ ಕೋಡಿಹಳ್ಳಿ ಹಾಗೂ ವಿವಿಧ ಭಾಗದ ನೂತನ ಪದಾಧಿಕಾರಿಗಳ ನೇಮಕ ಮತ್ತು ರೈತರ ಸೇರ್ಪಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ (ಅರಸೀಕೆರೆ) . ತಾಲೂಕು ಗೌರವಾಧ್ಯಕ್ಷ ಶ್ರೀಧರ್ (ಯಾದಪುರ). ತಾಲೂಕು ಪ್ರಧಾನ ಕಾರ್ಯದರ್ಶಿ ಅಶೋಕ್ (ನಾಗೇನಹಳ್ಳಿ) ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಮನೋಜ್( ಸೂಳೆಕೆರೆ) ಇವರುಗಳು ಉಪಸ್ಥಿತಿ ಇದ್ದರು.

ವರದಿ : ರಾಜು ಅರಸೀಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ