LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ 

Advertisement

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚು ಯುವಜನತೆಯನ್ನು ಮಾತ್ರವಲ್ಲ ಹಿರಿಯರನ್ನೂ ಬಿಡುತ್ತಿಲ್ಲ. ಕೈಯಲ್ಲಿ ಮೊಬೈಲ್ ಸಿಕ್ಕರೆ ಸಾಕು ರೀಲ್ಸ್ ಮಾಡಿ ವಿಡಿಯೋ ಅಪ್ ಲೋಡ್ ಮಾಡುವುದರಲ್ಲಿ ಕಾಲ ಕಳೆಯುತ್ತಾರೆ. ಇಲ್ಲವೇ ಮೊಬೈಲ್ ನಲ್ಲಿ ರೀಲ್ಸ್ ನೋ ಡುವುದರಲ್ಲಿಯೇ ಮುಳುಗಿರುತ್ತಾರೆ.

ಇದೇ ರೀತಿ ಮೊಬೈಲ್ ನಲ್ಲಿ ಪತ್ನಿ ರೀಲ್ಸ್ ನೋಡುತ್ತಾ ಕುಳಿತಿದ್ದಕ್ಕೆ ಕೋಪಗೊಂಡ ಪತಿ ಮಹಾಶಯ ಆಕೆಯನ್ನು ಹೊಡೆದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹೆಚ್‌ಎಎಲ್‌ ನ ವಿಭೂತಿಪುರದಲ್ಲಿ ಈ ಘಟನೆ ನಡೆದಿದೆ. ರೀಲ್ಸ್ ನೋಡುತ್ತಿದ್ದ ಪತ್ನಿಯನ್ನು ಕೊಲೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಘವೇಂದ್ರ ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಶೃತಿ ಪತಿಯಿಂದಲೇ ಕೊಲೆಯಾದ ಪತ್ನಿ.

ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ದಂಪತಿ ಇಬ್ಬರೇ ಮನೆಯಲ್ಲಿ ಇದ್ದರು. ಪತ್ನಿ ಯಾವಾಗಲೂ ರೀಲ್ಸ್ ನೋಡುತ್ತಿರುವ ಕಾರಣಕ್ಕೆ ಪತಿ ಜಗಳವಾಡಿದ್ದಾನೆ.

ಇಬ್ಬರ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿದೆ. ಪತಿ ರಾಘವೇಂದ್ರ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದಿದ್ದಾನೆ. ಗಂಭಿರವಾಗಿ ಹಲ್ಲೆಗೊಳಗಾದ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಪತ್ನಿ ಸಾವನ್ನಪ್ಪುತ್ತಿದ್ದಂತೆ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೋಷಕರ ದುಡುಕಿನ ನಿರ್ಧಾರಕ್ಕೆ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ ಸತೀಶ್ ಜಾರಕಿಹೊಳಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ : ಡಿ.ಕೆ.ಶಿವಕುಮಾರ್2 ವರ್ಷದ ಕಂದಮ್ಮನ ಮೇಲೆ ಹರಿದ ಕಾರು : ತಾಯಿ ಕಣ್ಣೆದುರೇ ದಾರುಣ ಸಾವುಯುಎಸ್ ಓಪನ್ ಟೆನಿಸ್: ಬೆನ್ ಸೇಲ್ಟನ್ ಸೆಮಿ ಪೈನಲ್ ಗೆ ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  ಪಾಕಿಸ್ತಾನ- ಶ್ರೀಲಂಕಾ ಎರಡನೇ ಸೆಮಿಪೈನಲ್ ಸೆ. 11 ರಂದು ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ': ಹಣ ಕಳೆದುಕೊಂಡ ಸಾವಿರಾರು ಮಂದಿ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ ನಾಳೆ ಭಾರತ- ಬಾಂಗ್ಲಾದೇಶ ಮೊದಲ ಸೆಮಿಪೈನಲ್