Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾನ ಪೂರ್ವಸಿದ್ದತೆಯ ಸುದ್ದಿಗೋಷ್ಠಿ ನಡೆಸಿದ ಎ.ಆರ್.ಓ

Advertisement
ಸಿರುಗುಪ್ಪ : -ನಗರದ ತಾಲೂಕು ಕಛೇರಿ ಸಭಾಂಗಣದಲ್ಲಿ ಮತದಾನ ಪೂರ್ವ ಸಿದ್ದತೆ ಕುರಿತು ಸಹಾಯಕ ಚುನಾವಣಾಧಿಕಾರಿ ಡಾ.ತಿರುಮಲೇಶ ಅವರು ರವಿವಾರದಂದು ಸುದ್ದಿಗೋಷ್ಠಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಮೇ.7ರಂದು ನಡೆಯುವ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ವಿದ್ಯುತ್, ರ‍್ಯಾಂಪ್, ಶೌಚಾಲಯ, ಕುಡಿಯುವ ನೀರು ವ್ಯವಸ್ಥೆಯನ್ನು ಸೆಕ್ಟರ್ ಅಧಿಕಾರಿಗಳ ಮೂಲಕ ಹಾಗೂ ಸ್ಥಳೀಯ ಅಧಿಕಾರಿಗಳ ಮೂಲಕ ವ್ಯವಸ್ಥೆ ಮಾಡಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ.

ಸಿರುಗುಪ್ಪ ವಿದಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ಜನರಲ್ ವೀಕ್ಷಣಾಧಿಕಾರಿಗಳು ಬಂದು ಚೆಕ್ ಪೋಸ್ಟ್ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿರುತ್ತಾರೆ. ನಮ್ಮಲ್ಲಿ ಮನೆ ಮನೆ ಮತದಾನಕ್ಕಾಗಿ 20 ಜನ ಅರ್ಜಿ ಸಲ್ಲಿಸಿದ್ದು, ಆ 20 ಮತದಾರರ ಮನೆಗೆ ತೆರಳಿ ಮತವನ್ನು ಸಂಗ್ರಹಿಸಿ ಅವುಗಳನ್ನು ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ.

ತಾಲೂಕಿನಲ್ಲಿ 32 ಸೂಕ್ಷ್ಮ, 12 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣೆಯ ಮತದಾನ ಕಾರ್ಯದಲ್ಲಿ ಪೋಲೀಸ್ ಹೊರತುಪಡಿಸಿ 1051 ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಮತದಾರರು ಯಾವುದೇ ಆಮಿಷಗೊಳಗಾಗಬಾರದು.

228 ಮತಗಟ್ಟೆಗಳಿಗೆ ಮತಯಂತ್ರಗಳನ್ನು ಸಿಬ್ಬಂದಿಗಳು ಹಾಗೂ ಪೋಲೀಸ್ ಬಿಗಿಭದ್ರತೆಯಲ್ಲಿ ಬಸ್‌ಗಳು, ಮಿನಿಬಸ್‌ಗಳು, ಜೀಪ್‌ಗಳ ಮೂಲಕ ತಲುಪಿಸಲಾಗುವುದು. ಮತದಾನದ ದಿನದ ಬೆಳಿಗ್ಗೆ ಚುನಾವಣೆಗೆ 20 ಅಭ್ಯರ್ಥಿಗಳು ಸ್ಪರ್ಧಿಸಿರುವುದರಿಂದ ತಲಾ 3ರಂತೆ 60 ಅಣಕು ಮತಗಳನ್ನು ಏಜೆಂಟ್‌ಗಳಿಂದ ಹಾಕಿಸಿ ಪದರ್ಶನ ಮಾಡಲಾಗುತ್ತದೆ.

ಸಂಜೆ ಮತದಾನ ಕೊನೆಗೊಂಡ ನಂತರ ಎಲ್ಲಾ ಇವಿಎಂ ಯಂತ್ರಗಳನ್ನು ಪೋಲೀಸ್ ಬಿಗಿಭದ್ರತೆಯಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜಿನಲ್ಲಿನ ಭದ್ರತಾ ಕೊಠಡಿಯ ಅಧಿಕಾರಿಗಳ ಸುಪರ್ದಿಗೆ ವಹಿಸಲಾಗುವುದೆಂದು ತಿಳಿಸಿದರು.

ಇದೇ ವೇಳೆ ತಹಶೀಲ್ದಾರ್ ಶಂಷಾಲಂ ಇದ್ದರು.

ವರದಿ ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ