Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂಧೂರ್ ಕುರಿತು ಆಕ್ಷೇಪಾರ್ಹ ಪೋಸ್ಟ್‌ : ಕಾನೂನು ವಿದ್ಯಾರ್ಥಿನಿ ಅರೆಸ್ಟ್ 

Advertisement
ಪುಣೆ: ಆಪರೇಷನ್ ಸಿಂಧೂರ್ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್‌ ಅನ್ನು ಹಂಚಿಕೊಂಡಿದ್ದ ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠ ಪನೋಲಿಯನ್ನು  ಕೋಲ್ಕತ್ತಾ ಪೊಲೀಸರು ಗುರುಗ್ರಾಮದಲ್ಲಿ ಬಂಧಿಸಿದ್ದಾರೆ.

ಶರ್ಮಿಷ್ಠ ಪನೋಲಿ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡು ಅಗೌರವ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು.

ವಿಡಿಯೋ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಆಕೆ ಅದನ್ನು ಅಳಿಸಿ ಹಾಕಿದ್ದಾಳೆ. ಮಾತ್ರವಲ್ಲದೇ ತನ್ನ ಹೇಳಿಕೆಗಳಿಗೆ ಕ್ಷಮೆಯಾಚಿಸಿದ್ದಾಳೆ.

ಆದರೂ ಈ ಘಟನೆಯ ಬಗ್ಗೆ ಕೋಲ್ಕತ್ತಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಂತರ ಕೋಲ್ಕತ್ತಾ ಪೊಲೀಸರು ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವಿವಾದದ ಬಳಿಕ ಪನೋಲಿ ಮತ್ತು ಆಕೆಯ ಕುಟುಂಬ ಪರಾರಿಯಾಗಿದ್ದರಿಂದ ಆಕೆಗೆ ಕಾನೂನು ನೋಟಿಸ್ ಜಾರಿ ಮಾಡಲು ಪದೇ ಪದೇ ಮಾಡಿದ ಪ್ರಯತ್ನಗಳು ವಿಫಲವಾಗಿದ್ದವು. ಇದರ ನಂತರ ನ್ಯಾಯಾಲಯ ಆಕೆಗೆ ಬಂಧನ ವಾರಂಟ್ ಹೊರಡಿಸಿತ್ತು.

ಅಂತಿಮವಾಗಿ ಪನೋಲಿಯನ್ನು ಪೊಲೀಸರು ಗುರುಗ್ರಾಮದಲ್ಲಿ ಬಂಧಿಸಿದ್ದಾರೆ. ಪನೋಲಿ ಬಂಧನವಾದ ಬಳಿಕ ಶನಿವಾರ ಕೋಲ್ಕತ್ತಾದ ಅಲಿಪೋರ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ