LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೊಲೆ ಯತ್ನ: ಆರು ಜನರ ಬಂಧನ

Advertisement
ಹುಬ್ಬಳ್ಳಿ: ನಗರದ ಕಮರೀಪೇಟೆ ಠಾಣೆಯಲ್ಲಿ ವರದಿಯಾಗಿದ್ದ ಅಪಹರಣ ಹಾಗೂ ಕೊಲೆ ಪ್ರಯತ್ನ ಪ್ರಕರಣಕ್ಕೆ ಆರು ಜನ ಆರೋಪಿಗಳನ್ನು ಕಮರಿಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಇಂದಿರಾನಗರದ ಪೃಥ್ವಿರಾಜ ಪೆದ್ದಣ್ಣ ಬೆತಾಪಲ್ಲಿ, ನವೀನ ತಿಪಾಲಪ್ಪ ತಲಪೂರ, ನಿಖಿಲ್ ಸಣ್ಣನಾಗಪ್ಪ ಕತ್ರಿಮಲ್ಲ, ಮನೋಜ ಆಚಿಜನೇಯ ಸಾಮ್ರಾಣಿ, ಯಶವಂತ ಸಿದ್ದಪ್ಪ ತಲಪೂರ ಹಾಗೂ ಪ್ರಭುಕುಮಾರ ಶೇಖರ ದೊಡಮನಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಜೂ. ೨೯ರಂದು ಬೆಳಗಿನ ಜಾವ ನಗರದ ಕೌಲಪೇಟ ಕ್ರಾಸ್ ಪಾನಶಾಪ ಹತ್ತಿರ ನಡೆದ ಕೃತ್ಯಕ್ಕೆ ಸಂಬಂಧಿಸಿದಂತೆ ಪಿರ್ಯಾದಿದಾರ ವಿನಾಯಕ ವೆಂಕಟೇಶ ಭಂಡಾರಿ ಎಂಬುವರು ನೀಡಿದ ದೂರಿನನ್ವಯ ಆರು ಜನರನ್ನು ದಸ್ತಗಿರ ಮಾಡಲಾಗಿದೆ ಎಂದು ಪೊಲೀಸ್ ಎನ್. ಶಶಿಕುಮಾರ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಎರಡು ಮೋಟಾರ್ ಸೈಕಲ್(ಕೆಎ೬೩, ಎಸ್ ೫೪೨೪), ಕೆಎ ೬೩, ಎಲ್ ೩೮೩೬ಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ ಸಿ.ಆರ್. ಮತ್ತಿತರ ಅಧಿಕಾರಿಗಳು ಇದ್ದರು.

ವರದಿ:ಸುಧೀರ್ ಕುಲಕರ್ಣಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ