Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೇಷ್ಟ ಸಂವಿಧಾನ ಫಲವಾಗಿ ಬಲಿಷ್ಟ ಭಾರತ ನಿರ್ಮಾಣ -ಶ್ರೀಸಿದ್ಧಗಂಗಾ ಮಠದಲ್ಲಿ ಧ್ವಜಾರೋಹಣಾ ನೆರವೇರಿಸಿದ ಸಚಿವ ಪರಮೇಶ್ವರ

Advertisement
ತುಮಕೂರು, (ಜನವರಿ 26):- ಶ್ರೇಷ್ಟ ಸಂವಿಧಾನದ ಫಲವಾಗಿ ಭಾರತವು ವಿಶ್ವದಲ್ಲಿ 4ನೇ ಆರ್ಥಿಕ ದೇಶವಾಗಿ ಬೆಳೆದಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಸಾದ ಸೇವಿಸಿದರು. ಬಳಿಕ ಮಠದ ಆವರಣದಲ್ಲಿ ಧ್ವಜಾರೋಹಣಾ ನೆರವೇರಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ಹೇಳಿದರು.

 

76 ವರ್ಷಗಳಲ್ಲಿ ಭಾರತ ಅನೇಕ ಸಾಧನೆಗಳನ್ನು ಮಾಡಿದೆ. ಬಡತನ, ಹಸಿವು, ಅನಕ್ಷರತೆಯಿಂದ ಬಳಲುತ್ತಿದ್ದ ಅಂದಿನ ಭಾರತ, ಬಲಿಷ್ಟ ಭಾರತವಾಗಿ ಬೆಳೆದಿದೆ. ಪ್ರಪಂಚದಲ್ಲಿ 4ನೇ ಆರ್ಥಿಕತೆಯ ದೇಶವಾಗಿದೆ. ಇದರಲ್ಲಿ ಪ್ರತಿಯೊಬ್ಬ ಭಾರತೀಯನ ಶ್ರಮವಿದೆ. ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ಸಿಗಲಿ ಎಂದು ಆಶಿಸಿದರು‌.

ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರು ಇಡೀ ದೇಶದಲ್ಲಿ ಯಾವುದೇ ಒಂದು ಧಾರ್ಮಿಕ ಸಂಸ್ಥೆ ನೀಡದಂತಹ ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕೋಟ್ಯಂತರ ಬಡ ಮಕ್ಕಳಿಗೆ ಜಾತಿ, ಮತ, ಬೇದವಿಲ್ಲದೆ ಅನ್ನ, ಆಶ್ರಯ, ಅಕ್ಷರ ಕಲ್ಪಿಸಿದರು. ಪರಮಪೂಜ್ಯ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ಇಂದಿನ ಶ್ರೀಗಳು ಸಾಗುತ್ತಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವರಾದ ಪರಮೇಶ್ವರ ಅವರು ಮಠದ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು.

ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿದರು. ಶಾಸಕರಾದ ಜ್ಯೋತಿಗಣೇಶ, ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಅವರು ಉಪಸ್ಥಿತರಿದ್ದರು

 

ವರದಿ: ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ