LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆಸರೆ ಯೋಜನೆ ಛಾಯಾಗ್ರಾಹಕರಿಗೆ ವರದಾನ: ಜಿಲ್ಲಾಧ್ಯಕ್ಷ ಅನಿಲ್ ಕುಮಾರ್

Advertisement

ಪಾವಗಡ : ರಾಜ್ಯದ ಸುಮಾರು ನಾಲ್ಕು ಲಕ್ಷ ಛಾಯಾಗ್ರಾಹಕರಿಗೆ ಆಸರೆಯಾಗುವ ನಿಟ್ಟಿನಲ್ಲಿ 'ಕರ್ನಾಟಕ ರಾಜ್ಯ ಛಾಯಾಗ್ರಾಹಕರ ಹಾಗೂ ವಿಡಿಯೋಗ್ರಾಫರ್‌ಗಳ ಸಂಘ' ಜಾರಿಗೆ ತಂದಿರುವ ‘ಆಸರೆ ಯೋಜನೆ’ ಅತ್ಯಂತ ಸೌಲಭ್ಯದಾಯಕವಾಗಿದ್ದು, ತಾಲೂಕಿನ ಎಲ್ಲಾ ಛಾಯಾಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಕರೆ ನೀಡಿದರು.

ಪಾವಗಡ ​ಪಟ್ಟಣದಲ್ಲಿ ಇರುವ ಪ್ರವಾಸಿ ಮಂದಿರದಲ್ಲಿ ಗುರುವಾರ ಜಿಲ್ಲಾ ಹಾಗೂ ತಾಲ್ಲೂಕು ಛಾಯಾಚಿತ್ರ ಗ್ರಾಹಕರ ಸಂಘದ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ '

ಆಸರೆ ಯೋಜನೆ'ಯ ಸದಸ್ಯತ್ವ ನೋಂದಣಿ ಅರ್ಜಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

​ಕುಟುಂಬದ ನೆರವಿಗೆ ರೂ. ಒಂದು  ಲಕ್ಷ ಪರಿಹಾರ:
​"ಛಾಯಾಗ್ರಾಹಕರು ನಿರಂತರ ಕೆಲಸದ ಒತ್ತಡ, ಅನಾರೋಗ್ಯ ಅಥವಾ ಆಕಸ್ಮಿಕವಾಗಿ ಸಾವಿಗೀಡಾದರೆ, ಅವರ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ  ಒಂದು  ಲಕ್ಷ ರೂಪಾಯಿ ಪರಿಹಾರ ನೀಡಲು ಈ ಯೋಜನೆ ರೂಪಿಸಲಾಗಿದೆ. ಕೇವಲ ನೂರ ಹತ್ತು ರೂಪಾಯಿ  ರೂಪಾಯಿ ವೆಚ್ಚದಲ್ಲಿ ನೋಂದಾಯಿಸಿಕೊಳ್ಳುವ ಮೂಲಕ, ಆಪತ್ತು ಬಂದಾಗ ಕುಟುಂಬಕ್ಕೆ ದೊಡ್ಡ ಮಟ್ಟದ ಆಸರೆ ಸಿಗಲಿದೆ" ಎಂದು ಅವರು ವಿವರಿಸಿದರು.
​ಇದೇ ವೇಳೆ, ತಂತ್ರಜ್ಞಾನದ ಯುಗದಲ್ಲಿ ಛಾಯಾಗ್ರಾಹಕರು ಎದುರಿಸುತ್ತಿರುವ ದೈನಂದಿನ ಸವಾಲುಗಳು ಹಾಗೂ ಸಂಘದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಅವರು ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ರಮೇಶ್, ಕೆಪಿಎ ನಿರ್ದೇಶಕ ನವೀನ್, ಜಿಲ್ಲಾ ಉಪಾಧ್ಯಕ್ಷ ಸಿದ್ದೇಶ್, ನಿರ್ದೇಶಕ ವೀರಭದ್ರಯ್ಯ, ತಾಲೂಕು ಅಧ್ಯಕ್ಷ ಎಚ್. ತಿಮ್ಮರಾಜು, ಉಪಾಧ್ಯಕ್ಷ ರಾಯುಡು, ಕಾರ್ಯದರ್ಶಿ ಚಂದ್ರಶೇಖರ್, ವೆಂಕಟೇಶ್, ಸ್ಟುಡಿಯೋ ಅಮರ್, ಹರಿ, ಪರಮೇಶ್, ನಾಗರಾಜು, ತಿರುಮಲೇಶ್, ರಂಗನಾಥ್, ಲಕ್ಷ್ಮಣ್, ಪ್ರಕಾಶ್ ಕೃಷ್ಣ, ನಾಗೇಶ್ ಸೇರಿದಂತೆ ತಾಲೂಕಿನ ಹಲವಾರು ಛಾಯಾಗ್ರಾಹಕರು ಉಪಸ್ಥಿತರಿದ್ದರು.

ವರದಿ: ಶಿವಾನಂದ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ